ದಾವಣಗೆರೆ ಕಡೆಯಿಂದ ಚಿತ್ರದುರ್ಗದತ್ತ ಬರುತ್ತಿದ್ದ ಈಚರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಟೊಗೆ ಅಪ್ಪಳಿಸಿದೆ. ಭೀಕರ ಅಪಘಾತಕ್ಕೆ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡಿದ್ದವರು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೂವರು ಮೃತಪಟ್ಟಿದ್ದಾರೆ. ಕಲ್ಲೇಶಪ್ಪ, ಚಂದ್ರಪ್ಪ, ಪಾರ್ವತಮ್ಮ, ರುದ್ರೇಶಪ್ಪ, ಸಿದ್ದೇಶ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.