<p><strong>ಚಿತ್ರದುರ್ಗ: </strong>ಸಂಬಂಧಿಕರ ಶವಸಂಸ್ಕಾರಕ್ಕೆ ಹೊರಟಿದ್ದ ಆಟೊದಲ್ಲಿ ದುಃಖ ಮಡುಗಟ್ಟಿತ್ತು. ಮಾರಘಟ್ಟ ಗ್ರಾಮ ತಲುಪಲು ಕೆಲವೇ ಕಿ.ಮೀ ದೂರವಿತ್ತು. ವೇಗವಾಗಿ ಬಂದ ಈಚರ್ ಲಾರಿ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಕಾತ್ರಾಳು ಕೆರೆಯ ಸೇತುವೆಯ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಗಳೂರು ತಾಲ್ಲೂಕಿನ ಕೆಳಗೋಟೆ ಗ್ರಾಮದ ಹಾಲಪ್ಪ (70), ರುದ್ರಮ್ಮ (58) ಹಾಗೂ ಸಣ್ಣ ಬಸವರಾಜಪ್ಪ (45) ಮೃತಪಟ್ಟವರು.</p>.<p>ಚಿತ್ರದುರ್ಗ ತಾಲ್ಲೂಕಿನ ಮಾರಘಟ್ಟದಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ಕೆಳಗೋಟೆ ಗ್ರಾಮದ ಒಂಬತ್ತು ಜನರು ಸರಕು ಸಾಗಣೆ ವಾಹನದಲ್ಲಿ ಹೊರಟಿದ್ದರು. ಬೀರಾವರ ಮಾರ್ಗವಾಗಿ ಮಾರಘಟ್ಟದತ್ತ ಪ್ರಯಾಣ ಬೆಳೆಸಿದ್ದರು. ಕಾತ್ರಾಳು ಕೆರೆಯ ಸೇತುವೆಯ ಬಳಿ ಈ ದುರಂತ ಸಂಭವಿಸಿದೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ದಾವಣಗೆರೆ ಕಡೆಯಿಂದ ಚಿತ್ರದುರ್ಗದತ್ತ ಬರುತ್ತಿದ್ದ ಈಚರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಟೊಗೆ ಅಪ್ಪಳಿಸಿದೆ. ಭೀಕರ ಅಪಘಾತಕ್ಕೆ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡಿದ್ದವರು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೂವರು ಮೃತಪಟ್ಟಿದ್ದಾರೆ. ಕಲ್ಲೇಶಪ್ಪ, ಚಂದ್ರಪ್ಪ, ಪಾರ್ವತಮ್ಮ, ರುದ್ರೇಶಪ್ಪ, ಸಿದ್ದೇಶ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಸಂಬಂಧಿಕರ ಶವಸಂಸ್ಕಾರಕ್ಕೆ ಹೊರಟಿದ್ದ ಆಟೊದಲ್ಲಿ ದುಃಖ ಮಡುಗಟ್ಟಿತ್ತು. ಮಾರಘಟ್ಟ ಗ್ರಾಮ ತಲುಪಲು ಕೆಲವೇ ಕಿ.ಮೀ ದೂರವಿತ್ತು. ವೇಗವಾಗಿ ಬಂದ ಈಚರ್ ಲಾರಿ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.</p>.<p>ತಾಲ್ಲೂಕಿನ ಕಾತ್ರಾಳು ಕೆರೆಯ ಸೇತುವೆಯ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಗಳೂರು ತಾಲ್ಲೂಕಿನ ಕೆಳಗೋಟೆ ಗ್ರಾಮದ ಹಾಲಪ್ಪ (70), ರುದ್ರಮ್ಮ (58) ಹಾಗೂ ಸಣ್ಣ ಬಸವರಾಜಪ್ಪ (45) ಮೃತಪಟ್ಟವರು.</p>.<p>ಚಿತ್ರದುರ್ಗ ತಾಲ್ಲೂಕಿನ ಮಾರಘಟ್ಟದಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ಕೆಳಗೋಟೆ ಗ್ರಾಮದ ಒಂಬತ್ತು ಜನರು ಸರಕು ಸಾಗಣೆ ವಾಹನದಲ್ಲಿ ಹೊರಟಿದ್ದರು. ಬೀರಾವರ ಮಾರ್ಗವಾಗಿ ಮಾರಘಟ್ಟದತ್ತ ಪ್ರಯಾಣ ಬೆಳೆಸಿದ್ದರು. ಕಾತ್ರಾಳು ಕೆರೆಯ ಸೇತುವೆಯ ಬಳಿ ಈ ದುರಂತ ಸಂಭವಿಸಿದೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ದಾವಣಗೆರೆ ಕಡೆಯಿಂದ ಚಿತ್ರದುರ್ಗದತ್ತ ಬರುತ್ತಿದ್ದ ಈಚರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಟೊಗೆ ಅಪ್ಪಳಿಸಿದೆ. ಭೀಕರ ಅಪಘಾತಕ್ಕೆ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡಿದ್ದವರು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೂವರು ಮೃತಪಟ್ಟಿದ್ದಾರೆ. ಕಲ್ಲೇಶಪ್ಪ, ಚಂದ್ರಪ್ಪ, ಪಾರ್ವತಮ್ಮ, ರುದ್ರೇಶಪ್ಪ, ಸಿದ್ದೇಶ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>