ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರಮಸಾಗರ: ಊಟ ಮಾಡಿ ಮಲಗಿದ ಕುಟುಂಬದ ಮೂವರ ಸಾವು, ಇಬ್ಬರು ಮಕ್ಕಳು ಗಂಭೀರ

Last Updated 13 ಜುಲೈ 2021, 6:17 IST
ಅಕ್ಷರ ಗಾತ್ರ

ಭರಮಸಾಗರ (ಚಿತ್ರದುರ್ಗ): ಇಲ್ಲಿಗೆ ಸಮೀಪದ ಇಸಾಮುದ್ರ ಲಂಬಾಣಿಹಟ್ಟಿಯ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ತಿಪ್ಪನಾಯ್ಕ (45), ಗುಂಡಿಬಾಯಿ (80),ಸುಧಾಬಾಯಿ (40) ಮೃತಪಟ್ಟವರು. ರಾಹುಲ್ (19) ಮತ್ತು ರಮ್ಯಾ (16) ಗಂಭೀರವಾಗಿದ್ದಾರೆ. ವಿಷ ಆಹಾರ ಸೇವನೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಕುಟುಂಬದ ಸದಸ್ಯರೆಲ್ಲರೂ ಸೋಮವಾರ ರಾತ್ರಿ 10 ಗಂಟೆಗೆ ಊಟ ಮಾಡಿ ಮಲಗಿದ್ದಾರೆ. ರಾತ್ರಿ ಸುಮಾರು 11.30ಕ್ಕೆ ವಾಂತಿ ಮಾಡಿಕೊಂಡಿದ್ದಾರೆ. ನೆರೆಹೊರೆಯವರು ತಕ್ಷಣ ಇವರನ್ನು ಭರಮಸಾಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಾರ್ಗ ಮಧ್ಯದಲ್ಲಿ ಗುಂಡಿಬಾಯಿ ಮತ್ತು ಸುಧಾಬಾಯಿ ಮೃತಪಟ್ಟಿದ್ದಾರೆ. ತಿಪ್ಪನಾಯ್ಕ ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕಸ್ಮಿಕ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಾಹಾರ ಸೇವನೆಯೇ ಸಾವಿಗೆ ಕಾರಣ ಎಂದು ಅನುಮಾನಿಸಲಾಗಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ, ಡಿವೈಎಸ್ಪಿ ಪಾಂಡುರಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT