<p>ನಾಯಕನಹಟ್ಟಿ: ಗುರುತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಭಾನುವಾರ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಭೇಟಿ ನೀಡಿ ದೇವರ ದರ್ಶನ ಪಡೆದರು.</p>.<p>‘ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಾಲಯದ ಬಗ್ಗೆ ಸಾಕಷ್ಟು ಕೇಳಿದ್ದೆ. ಇಲ್ಲಿನ ಜಾತ್ರೆಯು ಮಧ್ಯ ಕರ್ನಾಟಕದಲ್ಲಿ ಸಾಕಷ್ಟು ಖ್ಯಾತಿ ಪಡೆದಿದೆ. ಹೀಗಾಗಿ ದೇವರ ದರ್ಶನ ಮಾಡುವ ಉದ್ದೇಶಕ್ಕಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ದೇಗುಲದ ಪಕ್ಕದಲ್ಲಿನ ನೂತನ ದಾಸೋಹ ಮಂಟಪ, ರುದ್ರಾಭಿಷೇಕ ಭವನ ಮತ್ತು ಬೆಳ್ಳಿ ರಥದ ಬಗ್ಗೆ ಮಾಹಿತಿ ಪಡೆದರು. ಹೊರಮಠ ದೇಗುಲಕ್ಕೆ ಭೇಟಿ ನೀಡಿ ತಿಪ್ಪೇರುದ್ರಸ್ವಾಮಿ ಜೀವೈಕ್ಯ ಸಮಾಧಿಯಾಗಿದ್ದ ಸ್ಥಳ ಮತ್ತು ಗದ್ದುಗೆಯನ್ನು ಹಾಗೂ ಆವರಣದಲ್ಲಿರುವ ಕಲ್ಯಾಣಿಯನ್ನು ವೀಕ್ಷಿಸಿದರು.</p>.<p>ದೇವಾಲಯದಿಂದ ಗುರುತಿಪ್ಪೇರುದ್ರಸ್ವಾಮಿಗಳ ಭಾವಚಿತ್ರವನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-44-1066022154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಯಕನಹಟ್ಟಿ: ಗುರುತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಭಾನುವಾರ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಭೇಟಿ ನೀಡಿ ದೇವರ ದರ್ಶನ ಪಡೆದರು.</p>.<p>‘ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಾಲಯದ ಬಗ್ಗೆ ಸಾಕಷ್ಟು ಕೇಳಿದ್ದೆ. ಇಲ್ಲಿನ ಜಾತ್ರೆಯು ಮಧ್ಯ ಕರ್ನಾಟಕದಲ್ಲಿ ಸಾಕಷ್ಟು ಖ್ಯಾತಿ ಪಡೆದಿದೆ. ಹೀಗಾಗಿ ದೇವರ ದರ್ಶನ ಮಾಡುವ ಉದ್ದೇಶಕ್ಕಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ದೇಗುಲದ ಪಕ್ಕದಲ್ಲಿನ ನೂತನ ದಾಸೋಹ ಮಂಟಪ, ರುದ್ರಾಭಿಷೇಕ ಭವನ ಮತ್ತು ಬೆಳ್ಳಿ ರಥದ ಬಗ್ಗೆ ಮಾಹಿತಿ ಪಡೆದರು. ಹೊರಮಠ ದೇಗುಲಕ್ಕೆ ಭೇಟಿ ನೀಡಿ ತಿಪ್ಪೇರುದ್ರಸ್ವಾಮಿ ಜೀವೈಕ್ಯ ಸಮಾಧಿಯಾಗಿದ್ದ ಸ್ಥಳ ಮತ್ತು ಗದ್ದುಗೆಯನ್ನು ಹಾಗೂ ಆವರಣದಲ್ಲಿರುವ ಕಲ್ಯಾಣಿಯನ್ನು ವೀಕ್ಷಿಸಿದರು.</p>.<p>ದೇವಾಲಯದಿಂದ ಗುರುತಿಪ್ಪೇರುದ್ರಸ್ವಾಮಿಗಳ ಭಾವಚಿತ್ರವನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-44-1066022154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>