ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊಳಕಾಲ್ಮುರು ಕ್ಷೇತ್ರ ಸೇರಿದಂತೆ ಕೂಡ್ಲಿಗೆ, ಚಳ್ಳಕೆರೆ, ಪಾವಗಡ ಕ್ಷೇತ್ರಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡಲು ತುಂಗಭದ್ರಾ ಹಿನ್ನೀರು ಯೋಜನೆ ಜಾರಿಗೆ ತರಲಾಗಿದೆ. ಈಬೃಹತ್ ಯೋಜನೆಗೆ 2017–18ನೇ ಸಾಲಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ₹ 2,248 ಕೋಟಿ ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಿತ್ತು. ಈ ಯೋಜನೆಯ ಅನುಷ್ಠಾನದಲ್ಲಿ ನನ್ನ ಪಾತ್ರ ಅಪಾರವಾಗಿದೆ’ ಎಂದುಹೇಳಿದರು.