<p><strong>ಮೊಳಕಾಲ್ಮುರು</strong>: ತಾಲ್ಲೂಕಿನ ಊಡೇವಿನಲ್ಲಿ ಸೋಮವಾರ ಗ್ರಾಮ ದೇವರಾದ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು.</p>.<p>ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ಇಲ್ಲಿ ರಥೋತ್ಸವ ನಡೆಯುವುದು ವಾಡಿಕೆಯಾಗಿದೆ. ಅಂಗವಾಗಿ ಭಾನುವಾರ ಸಂಜೆ ಸ್ವಾಮಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಗಂಗಾಪೂಜೆಗೆ ಕರೆದೊಯ್ಯಲಾಯಿತು. ಮರಳಿ ಬಂದ ನಂತರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು, ರಾತ್ರಿಯಿಡೀ ಭಜನೆ ನಡೆಯಿತು.</p>.<p>ಸೋಮವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರಾಭಿಷೇಕ, ರಥದ ಅಲಂಕಾರ, ಮುಕ್ತಿಧ್ವಜ ಆಹ್ವಾನ, ರಥಕ್ಕೆ ಬಲಿ ಅನ್ನ ಸಮರ್ಪಣೆ ನಂತರ ಮಧ್ಯಾಹ್ನ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ದೇವಸ್ಥಾನ ಮುಂಭಾಗದಿಂದ ಆರಂಭವಾದ ರಥೋತ್ಸವ ಮುಖ್ಯಬೀದಿಗಳಲ್ಲಿ ಸಂಚರಿಸಿ ಮರಳಿ ದೇವಸ್ಥಾನ ಮುಂಭಾಗಕ್ಕೆ ಬಂದಿತು. ಭಕ್ತರು ದಾರಿಯುದ್ದಕ್ಕೂ ಸೂರುಬೆಲ್ಲ, ಬಾಳೆಹಣ್ಣು, ತೆಂಗಿನಕಾಯಿ ಅರ್ಪಣೆ ಮಾಡಿದರು.</p>.<p>ರಥೋತ್ಸವಕ್ಕೆ ನಂದಿಕೋಲು ಕುಣಿತ, ಡೊಳ್ಳುಕುಣಿತ. ಗೊಂಬೆಗಳ ಕುಣಿತ ಗಮನ ಸೆಳೆದವು.</p>.<p class="Subhead">ಹೂವಿನ ಪಲ್ಲಕ್ಕಿ ಉತ್ಸವ ಇಂದು: ಮಂಗಳವಾರ ಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ನಡೆಸಿದ ದೇವರನ್ನು ಗುಡಿದುಂಬಿಸುವ ಮೂಲಕ ರಥೋತ್ಸವಕ್ಕೆ ತೆರೆ ಬೀಳಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ತಾಲ್ಲೂಕಿನ ಊಡೇವಿನಲ್ಲಿ ಸೋಮವಾರ ಗ್ರಾಮ ದೇವರಾದ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು.</p>.<p>ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ಇಲ್ಲಿ ರಥೋತ್ಸವ ನಡೆಯುವುದು ವಾಡಿಕೆಯಾಗಿದೆ. ಅಂಗವಾಗಿ ಭಾನುವಾರ ಸಂಜೆ ಸ್ವಾಮಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಗಂಗಾಪೂಜೆಗೆ ಕರೆದೊಯ್ಯಲಾಯಿತು. ಮರಳಿ ಬಂದ ನಂತರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು, ರಾತ್ರಿಯಿಡೀ ಭಜನೆ ನಡೆಯಿತು.</p>.<p>ಸೋಮವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರಾಭಿಷೇಕ, ರಥದ ಅಲಂಕಾರ, ಮುಕ್ತಿಧ್ವಜ ಆಹ್ವಾನ, ರಥಕ್ಕೆ ಬಲಿ ಅನ್ನ ಸಮರ್ಪಣೆ ನಂತರ ಮಧ್ಯಾಹ್ನ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ದೇವಸ್ಥಾನ ಮುಂಭಾಗದಿಂದ ಆರಂಭವಾದ ರಥೋತ್ಸವ ಮುಖ್ಯಬೀದಿಗಳಲ್ಲಿ ಸಂಚರಿಸಿ ಮರಳಿ ದೇವಸ್ಥಾನ ಮುಂಭಾಗಕ್ಕೆ ಬಂದಿತು. ಭಕ್ತರು ದಾರಿಯುದ್ದಕ್ಕೂ ಸೂರುಬೆಲ್ಲ, ಬಾಳೆಹಣ್ಣು, ತೆಂಗಿನಕಾಯಿ ಅರ್ಪಣೆ ಮಾಡಿದರು.</p>.<p>ರಥೋತ್ಸವಕ್ಕೆ ನಂದಿಕೋಲು ಕುಣಿತ, ಡೊಳ್ಳುಕುಣಿತ. ಗೊಂಬೆಗಳ ಕುಣಿತ ಗಮನ ಸೆಳೆದವು.</p>.<p class="Subhead">ಹೂವಿನ ಪಲ್ಲಕ್ಕಿ ಉತ್ಸವ ಇಂದು: ಮಂಗಳವಾರ ಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ನಡೆಸಿದ ದೇವರನ್ನು ಗುಡಿದುಂಬಿಸುವ ಮೂಲಕ ರಥೋತ್ಸವಕ್ಕೆ ತೆರೆ ಬೀಳಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>