ಬಳ್ಳಾರಿ ಮೂಲದ ವಿ. ರಮೇಶ್ (50) ಮೃತ ವ್ಯಕ್ತಿ. ಚಾಲಕ ಸೇರಿ ವಾಹನದಲ್ಲಿದ್ದ 12 ಜನ ಗಾಯಗೊಂಡಿದ್ದಾರೆ. ಸಾರ್ವಜನಿಕರು ಹೆದ್ದಾರಿ ಆಂಬುಲೆನ್ಸ್ ಮೂಲಕ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ರಮೇಶ್ ಅವರು ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಎಲ್ಲ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.