ಮುಷ್ಕರದಿಂದಾಗಿ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣಕ್ಕೆ ಒಂದೂ ಬಸ್ ಬರದಿದ್ದರಿಂದ ದಿನವಿಡೀ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ಮುಷ್ಕರ ಮುಂದುವರಿದಿರುವುದರ ಬಗ್ಗೆ ಮಾಹಿತಿ ತಿಳಿಯದ ನೂರಾರು ಪ್ರಯಾಣಿಕರು ದೂರದ ಊರುಗಳಿಗೆ ಹೋಗಲು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದರು. ಬಸ್ ಇಲ್ಲ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ತಮ್ಮ ಲಗೇಜು ಹೊತ್ತುಕೊಂಡು ಖಾಸಗಿ ಬಸ್ ನಿಲ್ದಾಣದತ್ತ ಹೊರಟರು. ಬೆಂಗಳೂರು, ಶಿವಮೊಗ್ಗ, ಧರ್ಮಸ್ಥಳ, ಮಂಗಳೂರು, ಮೈಸೂರು, ದಾವಣಗೆರೆ ಸೇರಿ ಇನ್ನಿತರ ನಗರಗಳಿಗೆ ಹಾಗೂ ಗ್ರಾಮೀಣ ಭಾಗಗಳಿಗೆ ಸಮರ್ಪಕವಾಗಿ ಖಾಸಗಿ ಬಸ್ ಸೌಲಭ್ಯ ಇಲ್ಲದಿದ್ದರಿಂದ ಪ್ರಯಾಣಿಕರ ನೂಕುನುಗ್ಗಲು ಹೆಚ್ಚಾಯಿತು.