ಧರ್ಮಪುರ ಕೆರೆ ನೀರಿನ ಸಾಮರ್ಥ್ಯ 0.50 ಟಿಎಂಸಿ ಅಡಿ. 1100 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಸ್ವಾತಂತ್ರ್ಯಾಪೂರ್ವದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿಯೇ ಪೂರಕ ನಾಲೆ ಪ್ರಸ್ತಾಪವಾಗಿದ್ದರೂ ಪೂರಕನಾಲೆಯ ಕನಸು ಕನಸಾಗಿಯೇ ಉಳಿದಿತ್ತು.ಸ್ವಾತಂತ್ರ್ಯಾನಂತರ ವೀರೇಂದ್ರಪಾಟೀಲರು ಮುಖ್ಯಮಂತ್ರಿಯಾಗಿದ್ದಾಗ ದಿವಂಗತ ಬಿ.ಎಲ್. ಗೌಡರು ಪೂರಕನಾಲೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಿ
ದ್ದರು.ಬದಲಾದ ರಾಜಕೀಯಸನ್ನಿವೇಶದಲ್ಲಿ ಪೂರಕ ನಾಲೆಯ ಕನಸು ಜೀವಂತವಾಗಿಯೇ ಉಳಿದಿತ್ತು. ಅದು ಈಗ ನೆರವೇರಿದೆ.