<p><strong>ಚಿತ್ರದುರ್ಗ:</strong> ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್ಆರ್ಟಿಸಿ) ಬಸ್ಗಳು ಸೋಮವಾರ ರಸ್ತೆಗೆ ಇಳಿಯಲಿಲ್ಲ. ಹೀಗಾಗಿ, ಖಾಸಗಿ ಬಸ್ಗಳಲ್ಲಿ ಪ್ರಯಾಣಿಸಲು ಜನರು ಮುಗಿಬಿದ್ದಿದ್ದರು.</p>.<p>ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಕೆಎಸ್ಆರ್ಟಿಸಿ ಬಸ್ಗಳನ್ನು ರಸ್ತೆಗೆ ಇಳಿಸದಿರಲು ಸರ್ಕಾರ ನಿರ್ಧರಿಸಿತ್ತು. ಆದರೆ, ಖಾಸಗಿ ಬಸ್ಗಳು ಯಾವ ನಿರ್ಬಂಧವೂ ಇಲ್ಲದೇ ಸಂಚಾರಿಸಿದವು. ಇದರಿಂದ ಖಾಸಗಿ ಬಸ್ ನಿಲ್ದಾಣ ಜನಜಂಗುಳಿಯಿಂದ ತುಂಬಿತ್ತು.</p>.<p>ಯುಗಾದಿ ಹಬ್ಬದ ಖರೀದಿಗೆ ಗ್ರಾಮೀಣ ಪ್ರದೇಶದ ಜನರು ಕೋಟೆನಗರಿಗೆ ಬಂದಿದ್ದರು. ಖರೀದಿಯನ್ನು ಮುಗಿಸಿ ಊರುಗಳಿಗೆ ತೆರಳಲು ಪರದಾಡಿದರು. ಆಗೊಮ್ಮೆ ಈಗೊಮ್ಮೆ ತೆರಳುತ್ತಿದ್ದ ಖಾಸಗಿ ಬಸ್ಗಳ ಒಳತೂರಲು ಪ್ರಯಾಸಪಟ್ಟರು. ಬಸ್ ಟಾಪ್ ಮೇಲೆ ಹಲವರು ಕುಳಿತು ಪ್ರಯಾಣ ಬೆಳೆಸಿದರು.</p>.<p>‘ಜನತಾ ಕರ್ಫ್ಯೂ’ ಅಂಗವಾಗಿ ಭಾನುವಾರ ಯಾವುದೇ ಬಸ್ಗಳು ರಸ್ತೆಗೆ ಇಳಿದಿರಲಿಲ್ಲ. ಸೋಮವಾರ ಕೂಡ ಬಸ್ಗಳು ಸಂಚಾರ ಆರಂಭಿಸುವುದು ಅನುಮಾನ ಎನ್ನಲಾಗಿತ್ತು. ಆದರೆ, ಬೆಳಿಗ್ಗೆ 6 ಗಂಟೆಯಿಂದಲೇ ಖಾಸಗಿ ಬಸ್ಗಳು ನಿರಾತಂಕವಾಗಿ ಸಂಚಾರಿಸಿದವು. ಹಿರಿಯೂರು, ಚಳ್ಳಕೆರೆ ಹಾಗೂ ಹೊಳಲ್ಕೆರೆಗೆ ತೆರಳುವ ಟೆಂಪೊಗಳು ಪ್ರಯಾಣಿಕರಿಂದ ತುಂಬಿದ್ದವು.</p>.<p>ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗೂ ಖಾಸಗಿ ಬಸ್ಗಳು ಸೇವೆ ಒದಗಿಸಿದವು. ಈ ಬಸ್ಗಳ ಸಂಖ್ಯೆ ವಿರಳವಾಗಿದ್ದರಿಂದ ಬಹುತೇಕ ಎಲ್ಲವೂ ಭರ್ತಿಯಾಗಿದ್ದವು. ಟ್ಯಾಕ್ಸಿ, ದ್ವಿಚಕ್ರ ವಾಹನಗಳಲ್ಲಿಯೂ ಕೆಲವರು ಪ್ರಯಾಣ ಬೆಳೆಸಿದರು. ಹೊಸಪೇಟೆಗೆ ತೆರಳುವ ರಾಷ್ಟ್ರೀಯ ಹೆದ್ದಾರಿ–13, ತುರುವನೂರು ಗೇಟ್, ಚಳ್ಳಕೆರೆ ಗೇಟ್ಗಳಲ್ಲಿ ಸಾರ್ವಜನಿಕ ವಾಹನಗಳಿಗೆ ನೂರಾರು ಜನರು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್ಆರ್ಟಿಸಿ) ಬಸ್ಗಳು ಸೋಮವಾರ ರಸ್ತೆಗೆ ಇಳಿಯಲಿಲ್ಲ. ಹೀಗಾಗಿ, ಖಾಸಗಿ ಬಸ್ಗಳಲ್ಲಿ ಪ್ರಯಾಣಿಸಲು ಜನರು ಮುಗಿಬಿದ್ದಿದ್ದರು.</p>.<p>ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಕೆಎಸ್ಆರ್ಟಿಸಿ ಬಸ್ಗಳನ್ನು ರಸ್ತೆಗೆ ಇಳಿಸದಿರಲು ಸರ್ಕಾರ ನಿರ್ಧರಿಸಿತ್ತು. ಆದರೆ, ಖಾಸಗಿ ಬಸ್ಗಳು ಯಾವ ನಿರ್ಬಂಧವೂ ಇಲ್ಲದೇ ಸಂಚಾರಿಸಿದವು. ಇದರಿಂದ ಖಾಸಗಿ ಬಸ್ ನಿಲ್ದಾಣ ಜನಜಂಗುಳಿಯಿಂದ ತುಂಬಿತ್ತು.</p>.<p>ಯುಗಾದಿ ಹಬ್ಬದ ಖರೀದಿಗೆ ಗ್ರಾಮೀಣ ಪ್ರದೇಶದ ಜನರು ಕೋಟೆನಗರಿಗೆ ಬಂದಿದ್ದರು. ಖರೀದಿಯನ್ನು ಮುಗಿಸಿ ಊರುಗಳಿಗೆ ತೆರಳಲು ಪರದಾಡಿದರು. ಆಗೊಮ್ಮೆ ಈಗೊಮ್ಮೆ ತೆರಳುತ್ತಿದ್ದ ಖಾಸಗಿ ಬಸ್ಗಳ ಒಳತೂರಲು ಪ್ರಯಾಸಪಟ್ಟರು. ಬಸ್ ಟಾಪ್ ಮೇಲೆ ಹಲವರು ಕುಳಿತು ಪ್ರಯಾಣ ಬೆಳೆಸಿದರು.</p>.<p>‘ಜನತಾ ಕರ್ಫ್ಯೂ’ ಅಂಗವಾಗಿ ಭಾನುವಾರ ಯಾವುದೇ ಬಸ್ಗಳು ರಸ್ತೆಗೆ ಇಳಿದಿರಲಿಲ್ಲ. ಸೋಮವಾರ ಕೂಡ ಬಸ್ಗಳು ಸಂಚಾರ ಆರಂಭಿಸುವುದು ಅನುಮಾನ ಎನ್ನಲಾಗಿತ್ತು. ಆದರೆ, ಬೆಳಿಗ್ಗೆ 6 ಗಂಟೆಯಿಂದಲೇ ಖಾಸಗಿ ಬಸ್ಗಳು ನಿರಾತಂಕವಾಗಿ ಸಂಚಾರಿಸಿದವು. ಹಿರಿಯೂರು, ಚಳ್ಳಕೆರೆ ಹಾಗೂ ಹೊಳಲ್ಕೆರೆಗೆ ತೆರಳುವ ಟೆಂಪೊಗಳು ಪ್ರಯಾಣಿಕರಿಂದ ತುಂಬಿದ್ದವು.</p>.<p>ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗೂ ಖಾಸಗಿ ಬಸ್ಗಳು ಸೇವೆ ಒದಗಿಸಿದವು. ಈ ಬಸ್ಗಳ ಸಂಖ್ಯೆ ವಿರಳವಾಗಿದ್ದರಿಂದ ಬಹುತೇಕ ಎಲ್ಲವೂ ಭರ್ತಿಯಾಗಿದ್ದವು. ಟ್ಯಾಕ್ಸಿ, ದ್ವಿಚಕ್ರ ವಾಹನಗಳಲ್ಲಿಯೂ ಕೆಲವರು ಪ್ರಯಾಣ ಬೆಳೆಸಿದರು. ಹೊಸಪೇಟೆಗೆ ತೆರಳುವ ರಾಷ್ಟ್ರೀಯ ಹೆದ್ದಾರಿ–13, ತುರುವನೂರು ಗೇಟ್, ಚಳ್ಳಕೆರೆ ಗೇಟ್ಗಳಲ್ಲಿ ಸಾರ್ವಜನಿಕ ವಾಹನಗಳಿಗೆ ನೂರಾರು ಜನರು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>