ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗೂ ಖಾಸಗಿ ಬಸ್ಗಳು ಸೇವೆ ಒದಗಿಸಿದವು. ಈ ಬಸ್ಗಳ ಸಂಖ್ಯೆ ವಿರಳವಾಗಿದ್ದರಿಂದ ಬಹುತೇಕ ಎಲ್ಲವೂ ಭರ್ತಿಯಾಗಿದ್ದವು. ಟ್ಯಾಕ್ಸಿ, ದ್ವಿಚಕ್ರ ವಾಹನಗಳಲ್ಲಿಯೂ ಕೆಲವರು ಪ್ರಯಾಣ ಬೆಳೆಸಿದರು. ಹೊಸಪೇಟೆಗೆ ತೆರಳುವ ರಾಷ್ಟ್ರೀಯ ಹೆದ್ದಾರಿ–13, ತುರುವನೂರು ಗೇಟ್, ಚಳ್ಳಕೆರೆ ಗೇಟ್ಗಳಲ್ಲಿ ಸಾರ್ವಜನಿಕ ವಾಹನಗಳಿಗೆ ನೂರಾರು ಜನರು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.