ಉತ್ತರಪ್ರದೇಶದ ಗೋರಕ್ಪುರ ಜಿಲ್ಲೆಯ 58 ಕಾರ್ಮಿಕರು ತಮಿಳುನಾಡಿನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಮೇ 14ರಂದು ಚೆನ್ನೈನಿಂದ ಸರಕು ಸಾಗಣೆ ವಾಹನದಲ್ಲಿ ಉತ್ತರಪ್ರದೇಶಕ್ಕೆ ಪ್ರಯಾಣ ಬೆಳೆಸಿದ್ದರು. ಹೊಸೂರು, ಚಿಕ್ಕಬಳ್ಳಾಪುರ, ಪಾವಗಡ ಮೂಲಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಗಡಿ ತಲುಪಿದ್ದರು. ಅನುಮತಿ ಪಡೆಯದೇ ಪ್ರಯಾಣ ಬೆಳೆಸುತ್ತಿದ್ದ ಇವರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದು ಕ್ವಾರಂಟೈನ್ಗೆ ಒಳಪಡಿಸಿದ್ದರು.