2019ರ ಡಿಸೆಂಬರ್ 23ರಂದು ಅಪರಾಧಿಯು ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಪ್ರಕರಣದತನಿಖೆ ನಡೆಸಿದ್ದ ಹಿರಿಯೂರು ಗ್ರಾಮಾಂತರ
ಠಾಣೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಕೀಲ ಎಚ್.ಆರ್. ಜಗದೀಶ್ ಸರ್ಕಾರದ ಪರ ವಾದ ಮಂಡಿಸಿದ್ದರು.