ಚಿತ್ರದುರ್ಗ: ತಾಲ್ಲೂಕಿನ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಹಾಗೂ ಲಾರಿ ನಡುವೆ ಶುಕ್ರವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನ ವೈಟ್ಫೀಲ್ಡ್ ನಿವಾಸಿಗಳಾದ ಶಿವರಾಮ್ (45) ಹಾಗೂ ಚೇತನ್ ಕುಮಾರ್ (30) ಮೃತಪಟ್ಟವರು. ಸ್ವಾಮಿ (55) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಗೋವಾದಿಂದ ಬೆಂಗಳೂರಿಗೆ ಮರಳುತ್ತಿತ್ತು. ಮುಭಾಗದಲ್ಲಿ ಸಾಗುತ್ತಿದ್ದ ಲಾರಿ ಪಂಚರ್ ಆಗಿದೆ. ವೇಗವಾಗಿ ಬರುತ್ತಿದ್ದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.