<p><strong>ಚಿತ್ರದುರ್ಗ:</strong> ಮನೆಯ ಜಾಗದ ವಿಚಾರದಲ್ಲಿ ಕುಪಿತರಾಗಿ ಕೊಲೆಗೆ ಯತ್ನಿಸಿದ ಇಬ್ಬರು ಅಪರಾಧಿಗಳಿಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶಿಸಿದೆ.</p><p>ಮೊಳಕಾಲ್ಮುರು ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಗವಿಸಿದ್ಧಪ್ಪ ಹಾಗೂ ಕರಿಚಿತ್ತಪ್ಪ ಶಿಕ್ಷೆಗೆ ಗುರಿಯಾದವರು. ಗಾಯಾಳು ಕೃಷ್ಣಪ್ಪ ಎಂಬುವರಿಗೆ ₹ 1 ಲಕ್ಷ ಹಾಗೂ ಎಳ್ಳೆ ನಾಗಪ್ಪ ಎಂಬುವರಿಗೆ ₹ 50 ಸಾವಿರ ಪರಿಹಾರ ನೀಡಲು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಕೆ.ಗೀತಾ ಆದೇಶದಲ್ಲಿ ಸೂಚಿಸಿದ್ದಾರೆ.</p><p>ಗವಿಸಿದ್ಧಪ್ಪ, ಕರಿಚಿತ್ತಪ್ಪ ಹಾಗೂ ಎಳ್ಳೆನಾಗಪ್ಪ ಕುಟುಂಬಕ್ಕೆ ಜಾಗದ ವಿಚಾರದಲ್ಲಿ ವಿವಾದವಿತ್ತು. ಈ ಕುರಿತು ಎಳ್ಳೆನಾಗಪ್ಪ ಎಂಬುವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರಿಂದ ಕುಪಿತಗೊಂಡ ಅಪರಾಧಿಗಳು 2019ರ ಮೇ 7ರಂದು ಮಾರಕಾಸ್ತ್ರಗಳಿಗೆ ಹಲ್ಲೆ ನಡೆಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಪ್ರಧಾನ ಸರ್ಕಾರಿ ವಕೀಲ ಬಿ.ಗಣೇಶ ನಾಯ್ಕ್ ಸರ್ಕಾರದ ಪರ ವಾದ ಮಂಡಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಮನೆಯ ಜಾಗದ ವಿಚಾರದಲ್ಲಿ ಕುಪಿತರಾಗಿ ಕೊಲೆಗೆ ಯತ್ನಿಸಿದ ಇಬ್ಬರು ಅಪರಾಧಿಗಳಿಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶಿಸಿದೆ.</p><p>ಮೊಳಕಾಲ್ಮುರು ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಗವಿಸಿದ್ಧಪ್ಪ ಹಾಗೂ ಕರಿಚಿತ್ತಪ್ಪ ಶಿಕ್ಷೆಗೆ ಗುರಿಯಾದವರು. ಗಾಯಾಳು ಕೃಷ್ಣಪ್ಪ ಎಂಬುವರಿಗೆ ₹ 1 ಲಕ್ಷ ಹಾಗೂ ಎಳ್ಳೆ ನಾಗಪ್ಪ ಎಂಬುವರಿಗೆ ₹ 50 ಸಾವಿರ ಪರಿಹಾರ ನೀಡಲು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಕೆ.ಗೀತಾ ಆದೇಶದಲ್ಲಿ ಸೂಚಿಸಿದ್ದಾರೆ.</p><p>ಗವಿಸಿದ್ಧಪ್ಪ, ಕರಿಚಿತ್ತಪ್ಪ ಹಾಗೂ ಎಳ್ಳೆನಾಗಪ್ಪ ಕುಟುಂಬಕ್ಕೆ ಜಾಗದ ವಿಚಾರದಲ್ಲಿ ವಿವಾದವಿತ್ತು. ಈ ಕುರಿತು ಎಳ್ಳೆನಾಗಪ್ಪ ಎಂಬುವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರಿಂದ ಕುಪಿತಗೊಂಡ ಅಪರಾಧಿಗಳು 2019ರ ಮೇ 7ರಂದು ಮಾರಕಾಸ್ತ್ರಗಳಿಗೆ ಹಲ್ಲೆ ನಡೆಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಪ್ರಧಾನ ಸರ್ಕಾರಿ ವಕೀಲ ಬಿ.ಗಣೇಶ ನಾಯ್ಕ್ ಸರ್ಕಾರದ ಪರ ವಾದ ಮಂಡಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>