ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲೆ ಯತ್ನ: ಇಬ್ಬರಿಗೆ ಜೈಲು

Published 3 ಜನವರಿ 2024, 15:49 IST
Last Updated 3 ಜನವರಿ 2024, 15:49 IST
ಅಕ್ಷರ ಗಾತ್ರ

ಚಿತ್ರದುರ್ಗ: ಮನೆಯ ಜಾಗದ ವಿಚಾರದಲ್ಲಿ ಕುಪಿತರಾಗಿ ಕೊಲೆಗೆ ಯತ್ನಿಸಿದ ಇಬ್ಬರು ಅಪರಾಧಿಗಳಿಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶಿಸಿದೆ.

ಮೊಳಕಾಲ್ಮುರು ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಗವಿಸಿದ್ಧಪ್ಪ ಹಾಗೂ ಕರಿಚಿತ್ತಪ್ಪ ಶಿಕ್ಷೆಗೆ ಗುರಿಯಾದವರು. ಗಾಯಾಳು ಕೃಷ್ಣಪ್ಪ ಎಂಬುವರಿಗೆ ₹ 1 ಲಕ್ಷ ಹಾಗೂ ಎಳ್ಳೆ ನಾಗಪ್ಪ ಎಂಬುವರಿಗೆ ₹ 50 ಸಾವಿರ ಪರಿಹಾರ ನೀಡಲು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಬಿ.ಕೆ.ಗೀತಾ ಆದೇಶದಲ್ಲಿ ಸೂಚಿಸಿದ್ದಾರೆ.

ಗವಿಸಿದ್ಧಪ್ಪ, ಕರಿಚಿತ್ತಪ್ಪ ಹಾಗೂ ಎಳ್ಳೆನಾಗಪ್ಪ ಕುಟುಂಬಕ್ಕೆ ಜಾಗದ ವಿಚಾರದಲ್ಲಿ ವಿವಾದವಿತ್ತು. ಈ ಕುರಿತು ಎಳ್ಳೆನಾಗಪ್ಪ ಎಂಬುವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದರಿಂದ ಕುಪಿತಗೊಂಡ ಅಪರಾಧಿಗಳು 2019ರ ಮೇ 7ರಂದು ಮಾರಕಾಸ್ತ್ರಗಳಿಗೆ ಹಲ್ಲೆ ನಡೆಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಪ್ರಧಾನ ಸರ್ಕಾರಿ ವಕೀಲ ಬಿ.ಗಣೇಶ ನಾಯ್ಕ್‌ ಸರ್ಕಾರದ ಪರ ವಾದ ಮಂಡಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT