<p><strong>ಮೊಳಕಾಲ್ಮುರು</strong>: ಕುರಿ ಮೇಯಿಸಲು ತೆರಳಿದ್ದ ತಾಯಿ, ಮಗ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗಳಹಟ್ಟಿಯಲ್ಲಿ ಬುಧವಾರ ನಡೆದಿದೆ.</p>.<p>ಮೇಗಳಹಟ್ಟಿಯ ಮಾರಕ್ಕ (40), ಮಗ ವೆಂಕಟೇಶ (17) ಮೃತಪಟ್ಟವರು. ಬುಧವಾರ ಸಂಜೆ ಕುರಿ ಮೇಯಿಸಿಕೊಂಡು ಮನೆಗೆ ಮರಳುವಾಗ ಗುಡುಗು, ಬಿರುಗಾಳಿ ಸಹಿತ ಮಳೆ ಆರಂಭವಾಗಿದೆ.</p>.<p>ಸಮೀಪದ ಹುಣಸೆ ಮರದಡಿ ಆಶ್ರಯ ಪಡೆದಿದ್ದ ಇವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಕತ್ತಲಾದರೂ ಕುರಿ ಮನೆಗೆ ಮರಳದಿರುವುದರಿಂದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಕುರಿ ಮೇಯಿಸಲು ತೆರಳಿದ್ದ ತಾಯಿ, ಮಗ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗಳಹಟ್ಟಿಯಲ್ಲಿ ಬುಧವಾರ ನಡೆದಿದೆ.</p>.<p>ಮೇಗಳಹಟ್ಟಿಯ ಮಾರಕ್ಕ (40), ಮಗ ವೆಂಕಟೇಶ (17) ಮೃತಪಟ್ಟವರು. ಬುಧವಾರ ಸಂಜೆ ಕುರಿ ಮೇಯಿಸಿಕೊಂಡು ಮನೆಗೆ ಮರಳುವಾಗ ಗುಡುಗು, ಬಿರುಗಾಳಿ ಸಹಿತ ಮಳೆ ಆರಂಭವಾಗಿದೆ.</p>.<p>ಸಮೀಪದ ಹುಣಸೆ ಮರದಡಿ ಆಶ್ರಯ ಪಡೆದಿದ್ದ ಇವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಕತ್ತಲಾದರೂ ಕುರಿ ಮನೆಗೆ ಮರಳದಿರುವುದರಿಂದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>