ಮೊಳಕಾಲ್ಮೂರು (ಚಿತ್ರದುರ್ಗ): ತಾಲ್ಲೂಕಿನ ರಾಯಪುರದಲ್ಲಿ ಹಾದು ಹೋಗಿರುವ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು ಕಡೆಯಿಂದ ಬಳ್ಳಾರಿಗೆ ತೆರಳುತ್ತಿದ್ದ ರಾಯಲ್ ಎನ್ ಫೀಲ್ಡ್ ದ್ವಿಚಕ್ರ ವಾಹನ ರಾಯಪುರದಲ್ಲಿ ರಸ್ತೆ ದಾಟುತ್ತಿದ್ದ ದಾಸರ ಮುತ್ತಯ್ಯ (65) ಎಂಬವರಿಗೆ ಡಿಕ್ಕಿ ಹೊಡೆದಿದೆ. ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಬೈಕ್ ಡಿವೈಡರ್ ಗೆ ಅಪ್ಪಳಿಸಿದೆ.
ಈ ಸಂದರ್ಭದಲ್ಲಿ ಮತ್ತೊಂದು ವಾಹನವು ಬೈಕ್ ಸವಾರ ಅಮರ್ ಕುಮಾರ್ ಮೇಲೆ ಹರಿದಿದೆ. ಇದರಿಂದ ಬೈಕ್ ಸವಾರ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದ ಸಹ ಸವಾರ ಉದಯಕಿರಣ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.