ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಳಕಾಲ್ಮೂರು: ಸರಣಿ ಅಪಘಾತದಲ್ಲಿ ಇಬ್ಬರ ಸಾವು

Last Updated 13 ಮಾರ್ಚ್ 2021, 7:41 IST
ಅಕ್ಷರ ಗಾತ್ರ

ಮೊಳಕಾಲ್ಮೂರು (ಚಿತ್ರದುರ್ಗ): ತಾಲ್ಲೂಕಿನ ರಾಯಪುರದಲ್ಲಿ ಹಾದು ಹೋಗಿರುವ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರು ಕಡೆಯಿಂದ ಬಳ್ಳಾರಿಗೆ ತೆರಳುತ್ತಿದ್ದ ರಾಯಲ್ ಎನ್ ಫೀಲ್ಡ್ ದ್ವಿಚಕ್ರ ವಾಹನ ರಾಯಪುರದಲ್ಲಿ ರಸ್ತೆ ದಾಟುತ್ತಿದ್ದ ದಾಸರ ಮುತ್ತಯ್ಯ (65) ಎಂಬವರಿಗೆ ಡಿಕ್ಕಿ ಹೊಡೆದಿದೆ. ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಬೈಕ್ ಡಿವೈಡರ್ ಗೆ ಅಪ್ಪಳಿಸಿದೆ.

ಈ ಸಂದರ್ಭದಲ್ಲಿ ಮತ್ತೊಂದು ವಾಹನವು ಬೈಕ್ ಸವಾರ ಅಮರ್ ಕುಮಾರ್ ಮೇಲೆ ಹರಿದಿದೆ. ಇದರಿಂದ ಬೈಕ್ ಸವಾರ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದ ಸಹ ಸವಾರ ಉದಯಕಿರಣ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT