ಸೌಭಾಗ್ಯ ಬಸವರಾಜನ್ ಎರಡೂವರೆ ವರ್ಷದಿಂದ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಒಬ್ಬರೇ ಅಧಿಕಾರ ಅನುಭವಿಸಿದರೆ ಉಳಿದವರು ಏನು ಮಾಡಬೇಕು. ಕೊಟ್ಟ ಮಾತಿನಂತೆ ಅವರು ಅಧಿಕಾರ ಬಿಟ್ಟುಕೊಡದ ಹಿನ್ನೆಲೆಯಲ್ಲಿ ಅವರನ್ನು ಕೆಳಗಿಳಿಸಲೇಬೇಕು ಎಂದು ಮಾಜಿ ಸಚಿವ ಆಂಜನೇಯ, ಸಂಸದ ಚಂದ್ರಪ್ಪ, ಶಾಸಕ ರಘುಮೂರ್ತಿ, ಮಾಜಿ ಶಾಸಕ ಗೋವಿಂದಪ್ಪ, ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಫಾತ್ಯರಾಜನ್ ಅವರ ಬಳಿ ಈಗಲೂ ಸದಸ್ಯರು ಒತ್ತಾಯಿಸುತ್ತಲೇ ಬಂದಿದ್ದಾರೆ.