<p><strong>ಹಿರಿಯೂರು</strong>: ನಗರ ವ್ಯಾಪ್ತಿಯಲ್ಲಿ ಎರಡು ಹಂತದಲ್ಲಿ ಒಳಚರಂಡಿ ವ್ಯವಸ್ಥೆ ಜಾರಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಎ. ವಾಸೀಂ ತಿಳಿಸಿದರು.</p>.<p>ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2026–27ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಕೆ ಸಂಬಂಧ ಕರೆದಿದ್ದ ಸಾರ್ವಜನಿಕರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ವಿಶಾಲವಾದ ಮಾರುಕಟ್ಟೆ, ಬೀದಿಬದಿ ವ್ಯಾಪಾರಿಗಳಿಗೆ ಫುಡ್ ಕೋರ್ಟ್ ನಿರ್ಮಿಸುವ ಯೋಜನೆಗಳಿದ್ದು, ಸದ್ಯದಲ್ಲೇ ಕಾರ್ಯರೂಪಕ್ಕೆ ತರಲಾಗುವುದು. ನಗರದ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರೆ ತಕ್ಷಣ ಪರಿಹರಿಸಲು ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.</p>.<p>ವ್ಯಾಪಾರ, ವಹಿವಾಟು ಅಭಿವೃದ್ಧಿಪಡಿಸಲು ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು. ಬಾಕಿ ಇರುವ ಬಾಡಿಗೆ ವಸೂಲಿಗೆ ಕ್ರಮ ತೆಗೆದುಕೊಳ್ಳಲಾಗಿದೆ. ಸ್ಥಳೀಯರ ನೆರವಿನೊಂದಿಗೆ ಉದ್ಯಾನಗಳ ಅಭಿವೃದ್ಧಿ ಮಾಡಲಾಗುವುದು ಎಂದು ವಾಸೀಂ ಭರವಸೆ ನೀಡಿದರು.</p>.<p>ವಾಣಿವಿಲಾಸ ಶಿಕ್ಷಣ ಸಂಸ್ಥೆಯ ಹಿಂಭಾಗದ 12 ಅಡಿ ರಸ್ತೆ ಮತ್ತು ಜನತಾ ಸ್ಟೋರ್ ಹಿಂಭಾಗದ ಜಾಗವನ್ನು ಒತ್ತುವರಿ ಮಾಡಿದ್ದು ಅದನ್ನು ತೆರವುಗೊಳಿಸಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡಬೇಕು ಎಂದು ವಿ.ಶಿವಕುಮಾರ್ ಸಲಹೆ ನೀಡಿದರು.</p>.<p>ವಾರ್ಡ್ ಸಂಖ್ಯೆ 1 ರಿಂದ 7ರವರೆಗಿನ ಪ್ರದೇಶಗಳನ್ನು ಒಳಚರಂಡಿ ಯೋಜನೆಗೆ ಪರಿಗಣಿಸಿಲ್ಲ ಎಂಬ ಮಾಹಿತಿ ಇದೆ. ಕೊಳಚೆ ಪ್ರದೇಶಗಳು ಹೆಚ್ಚಿರುವ ಕಾರಣ ಇಲ್ಲಿಂದಲೇ ಒಳಚರಂಡಿ ಕಾಮಗಾರಿ ಆರಂಭಿಸಬೇಕು. 5ನೇ ವಾರ್ಡ್ ನಿವಾಸಿಗಳಿಗೆ ವಿವಿ ಸಾಗರದ ನೀರು ಪೂರೈಕೆ ಮಾಡಬೇಕು ಎಂದು ಸಿ.ಬಿ. ಮಹಾಲಿಂಗಪ್ಪ ಒತ್ತಾಯಿಸಿದರು.</p>.<p>ಪೌರ ಕಾರ್ಮಿಕರ ಮಕ್ಕಳ ಕಲ್ಯಾಣಕ್ಕೆ ಬಜೆಟ್ನಲ್ಲಿ ಅನುದಾನ ಮೀಸಲಿಡಬೇಕು ಎಂದು ದಲಿತ ಮುಖಂಡ ಕೆ.ಪಿ. ಶ್ರೀನಿವಾಸ್ ಸಲಹೆ ನೀಡಿದರು.</p>.<p>ಮಾಂಸ ಮಾರುಕಟ್ಟೆಯಿಂದ ನಗರಸಭೆಗೆ ಆದಾಯ ಬರುತ್ತಿಲ್ಲ. ಆದರೂ ಪೌರಕಾರ್ಮಿಕರು ನಿತ್ಯವೂ ಅಲ್ಲಿ ಸ್ವಚ್ಛತೆ ಮಾಡುತ್ತಿದ್ದಾರೆ. ಮಾಂಸ ಮಾರುಕಟ್ಟೆಗೆ ಕಾಯಕಲ್ಪ ಆಗಬೇಕಿದೆ ಎಂದು ಅಬ್ದುಲ್ ಅಜೀಜ್ ಹೇಳಿದರು.</p>.<p>ಹೆಂಜಾರಪ್ಪ, ಶಿವು ಖಂಡೇನಹಳ್ಳಿ, ರಾಘವೇಂದ್ರ, ಅರುಣ್ ಕುಮಾರ್, ಸೈಯದ್ ಮುಷ್ತಾಕ್, ಎಂಜಿನಿಯರ್ ಗುರು, ನಗರಸಭೆ ಎಂಜಿನಿಯರ್ ಶ್ರೀರಂಗಯ್ಯ, ಆರೋಗ್ಯ ನಿರೀಕ್ಷಕರಾದ ಸಂಧ್ಯಾ, ಮಹಾಲಿಂಗರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ನಗರ ವ್ಯಾಪ್ತಿಯಲ್ಲಿ ಎರಡು ಹಂತದಲ್ಲಿ ಒಳಚರಂಡಿ ವ್ಯವಸ್ಥೆ ಜಾರಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಎ. ವಾಸೀಂ ತಿಳಿಸಿದರು.</p>.<p>ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2026–27ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಕೆ ಸಂಬಂಧ ಕರೆದಿದ್ದ ಸಾರ್ವಜನಿಕರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ವಿಶಾಲವಾದ ಮಾರುಕಟ್ಟೆ, ಬೀದಿಬದಿ ವ್ಯಾಪಾರಿಗಳಿಗೆ ಫುಡ್ ಕೋರ್ಟ್ ನಿರ್ಮಿಸುವ ಯೋಜನೆಗಳಿದ್ದು, ಸದ್ಯದಲ್ಲೇ ಕಾರ್ಯರೂಪಕ್ಕೆ ತರಲಾಗುವುದು. ನಗರದ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರೆ ತಕ್ಷಣ ಪರಿಹರಿಸಲು ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.</p>.<p>ವ್ಯಾಪಾರ, ವಹಿವಾಟು ಅಭಿವೃದ್ಧಿಪಡಿಸಲು ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು. ಬಾಕಿ ಇರುವ ಬಾಡಿಗೆ ವಸೂಲಿಗೆ ಕ್ರಮ ತೆಗೆದುಕೊಳ್ಳಲಾಗಿದೆ. ಸ್ಥಳೀಯರ ನೆರವಿನೊಂದಿಗೆ ಉದ್ಯಾನಗಳ ಅಭಿವೃದ್ಧಿ ಮಾಡಲಾಗುವುದು ಎಂದು ವಾಸೀಂ ಭರವಸೆ ನೀಡಿದರು.</p>.<p>ವಾಣಿವಿಲಾಸ ಶಿಕ್ಷಣ ಸಂಸ್ಥೆಯ ಹಿಂಭಾಗದ 12 ಅಡಿ ರಸ್ತೆ ಮತ್ತು ಜನತಾ ಸ್ಟೋರ್ ಹಿಂಭಾಗದ ಜಾಗವನ್ನು ಒತ್ತುವರಿ ಮಾಡಿದ್ದು ಅದನ್ನು ತೆರವುಗೊಳಿಸಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡಬೇಕು ಎಂದು ವಿ.ಶಿವಕುಮಾರ್ ಸಲಹೆ ನೀಡಿದರು.</p>.<p>ವಾರ್ಡ್ ಸಂಖ್ಯೆ 1 ರಿಂದ 7ರವರೆಗಿನ ಪ್ರದೇಶಗಳನ್ನು ಒಳಚರಂಡಿ ಯೋಜನೆಗೆ ಪರಿಗಣಿಸಿಲ್ಲ ಎಂಬ ಮಾಹಿತಿ ಇದೆ. ಕೊಳಚೆ ಪ್ರದೇಶಗಳು ಹೆಚ್ಚಿರುವ ಕಾರಣ ಇಲ್ಲಿಂದಲೇ ಒಳಚರಂಡಿ ಕಾಮಗಾರಿ ಆರಂಭಿಸಬೇಕು. 5ನೇ ವಾರ್ಡ್ ನಿವಾಸಿಗಳಿಗೆ ವಿವಿ ಸಾಗರದ ನೀರು ಪೂರೈಕೆ ಮಾಡಬೇಕು ಎಂದು ಸಿ.ಬಿ. ಮಹಾಲಿಂಗಪ್ಪ ಒತ್ತಾಯಿಸಿದರು.</p>.<p>ಪೌರ ಕಾರ್ಮಿಕರ ಮಕ್ಕಳ ಕಲ್ಯಾಣಕ್ಕೆ ಬಜೆಟ್ನಲ್ಲಿ ಅನುದಾನ ಮೀಸಲಿಡಬೇಕು ಎಂದು ದಲಿತ ಮುಖಂಡ ಕೆ.ಪಿ. ಶ್ರೀನಿವಾಸ್ ಸಲಹೆ ನೀಡಿದರು.</p>.<p>ಮಾಂಸ ಮಾರುಕಟ್ಟೆಯಿಂದ ನಗರಸಭೆಗೆ ಆದಾಯ ಬರುತ್ತಿಲ್ಲ. ಆದರೂ ಪೌರಕಾರ್ಮಿಕರು ನಿತ್ಯವೂ ಅಲ್ಲಿ ಸ್ವಚ್ಛತೆ ಮಾಡುತ್ತಿದ್ದಾರೆ. ಮಾಂಸ ಮಾರುಕಟ್ಟೆಗೆ ಕಾಯಕಲ್ಪ ಆಗಬೇಕಿದೆ ಎಂದು ಅಬ್ದುಲ್ ಅಜೀಜ್ ಹೇಳಿದರು.</p>.<p>ಹೆಂಜಾರಪ್ಪ, ಶಿವು ಖಂಡೇನಹಳ್ಳಿ, ರಾಘವೇಂದ್ರ, ಅರುಣ್ ಕುಮಾರ್, ಸೈಯದ್ ಮುಷ್ತಾಕ್, ಎಂಜಿನಿಯರ್ ಗುರು, ನಗರಸಭೆ ಎಂಜಿನಿಯರ್ ಶ್ರೀರಂಗಯ್ಯ, ಆರೋಗ್ಯ ನಿರೀಕ್ಷಕರಾದ ಸಂಧ್ಯಾ, ಮಹಾಲಿಂಗರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>