ಮನವಿಗೆ ಸ್ಪಂದಿಸಿದ ಸರ್ಕಾರ ಈ ಬಾರಿ ಜುಲೈ ತಿಂಗಳಿನಿಂದಲೇ ಭದ್ರಾ ನೀರನ್ನು ಜಿಲ್ಲೆಯ ಏಕೈಕ ಜೀವನದಿ ವೇದಾವತಿ ನದಿ ಮೂಲಕ ವಾಣಿವಿಲಾಸ ಜಲಾಶಯಕ್ಕೆ ಹರಿಸಲು ಆರಂಭಿಸಿತ್ತು. ಪ್ರಸ್ತುತ 108 ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಇದರಿಂದ ವಾಣಿವಿಲಾಸ ಸಾಗರದ ಹಿನ್ನೀರು ಪ್ರದೇಶಕ್ಕೆ ಸಮೀಪವಿರುವ ತಾಲ್ಲೂಕಿನ ಲಕ್ಕಿಹಳ್ಳಿ, ಮಾಡದಕೆರೆ, ಮತ್ತೋಡು, ಗುಡ್ಡದನೇರಲಕೆರೆ, ಕಂಚೀಪುರ ಗ್ರಾಮ ಪಂಚಾಯಿತಿ ಸೇರಿ ಇನ್ನಿತರ ಕಡೆಗಳಲ್ಲಿ ಅಂತರ್ಜಲ ವೃದ್ಧಿಯಾಗಿದೆ.