ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರೈತರು ಸಾಕಷ್ಟು ಕೃಷಿಹೊಂಡ, ಜಮೀನುಗಳಲ್ಲಿ ಬದು ನಿರ್ಮಾಣ ಮಾಡಿಕೊಂಡಿದ್ದಾರೆ. ಇದರಿಂದಾಗಿ ಅಂತರ್ಜಲ ವೃದ್ಧಿಯಾಗಿದ್ದು, 3 ದಿನಗಳಿಂದ ಈ ಕೈಪಂಪ್ನಲ್ಲಿ ಸ್ವಾಭಾವಿಕವಾಗಿ ನೀರು ಹೊರಬರುತ್ತಿದೆ. ಹಿಂದೆ ಸಾಕಷ್ಟು ಜಗ್ಗಿದರೂ ಹೊರಬರದ ನೀರು ಈಗ ಸ್ವಾಭಾವಿಕಾಗಿ ಬರುತ್ತಿರುವುದು ಜನರಲ್ಲಿ ಅಚ್ಚರಿಯನ್ನುಂಟು ಮಾಡಿದೆ. ಕೈಪಂಪ್ನಿಂದ ಹೊರ ಬರುತ್ತಿರುವ ನೀರು ರೈತರ ಜಮೀನಿನ ಅಂಚಿನ ಹಳ್ಳದ ಮೂಲಕ ಚೌಳಕಟ್ಟೆ ಸೇರುತ್ತಿದೆ ಎನ್ನುತ್ತಾರೆ ಗ್ರಾಮದ ಯುವಕ ರಮೇಶ್. ಅಂತರ್ಜಲ ವೃದ್ಧಿಯಾಗಿದ್ದರಿಂದ ತೆಂಗು, ಅಡಿಕೆ ಹಾಗೂ ಬಾಳೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಸಾಕಷ್ಟು ಅನುಕೂಲವಾಗಿದ್ದು, ಗ್ರಾಮದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.