ಚಿತ್ರದುರ್ಗ: ನಗರದ ಪಿಳ್ಳೇಕೆರೆನಹಳ್ಳಿ ಚೆಕ್ಪೋಸ್ಟ್ನಲ್ಲಿ ಕಾರು ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ ₹20.35 ಲಕ್ಷ ಪತ್ತೆಹಚ್ಚಿದ್ದು, ದಾಖಲೆ ಹಾಜರುಪಡಿಸಲು ವಿಫಲವಾಗಿದ್ದರಿಂದ ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಮನೋಜ್ಕುಮಾರ್ ಎಂಬುವರು ಮಂಗಳವಾರ ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದರು. ನಗರದ ಹೊರವಲಯದ ಪಿಳ್ಳೇಕೆರೆನಹಳ್ಳಿ ಚೆಕ್ಪೋಸ್ಟ್ನಲ್ಲಿ ಚುನಾವಣಾ ಸಿಬ್ಬಂದಿ ಕಾರು ತಪಾಸಣೆ ನಡೆಸಿದರು. ಈ ವೇಳೆ ನಗದು ಪತ್ತೆಯಾಗಿತ್ತು.
ಸಾಗಣೆ ಮಾಡುತ್ತಿದ್ದ ಹಣಕ್ಕೆ ಯಾವುದೇ ದಾಖಲೆ ಇರಲಿಲ್ಲ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣದ ಮೂಲ ಹಾಗೂ ಇನ್ನಿತರ ಮಾಹಿತಿಗಾಗಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ.