‘ಭೇಟಿ ಸಮಯದಲ್ಲಿ ವಾರ್ಡನ್ ಹಾಜರಿರಲಿಲ್ಲ. ಹಾಜರಾತಿ ಪುಸ್ತಕವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದು, ಸ್ವಚ್ಛತೆ ಇಲ್ಲದಿರುವುದು, ತಾಲ್ಲೂಕು ಮತ್ತು ಜಿಲ್ಲಾ ಬಿಸಿಎಂ ಅಧಿಕಾರಿಗಳು ಕಾಲಕಾಲಕ್ಕೆ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿರುವುದು ಕಂಡುಬಂದಿದೆ. ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು’ ಎಂದು ಹೇಳಿದರು.