<p><strong>ಚಿತ್ರದುರ್ಗ:</strong> ಭದ್ರಾ ಮೇಲ್ದಂಡೆ ಯೋಜನೆಯ ನಾಲೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳುತ್ತಿರುವ ಭೂಮಿಗೆ ನಗದು ಪರಿಹಾರದ ಬದಲು ಪರ್ಯಾಯ ಜಮೀನು ನೀಡಿ ಎಂದು ಭೂಮಿ ಕಳೆದುಕೊಳ್ಳುತ್ತಿರುವ ರೈತರು ಸರ್ಕಾರವನ್ನು ಒತ್ತಾಯಿಸಿದರು.</p>.<p>ತಾಲ್ಲೂಕಿನ ಕಲ್ಲೇನಹಳ್ಳಿ ಹಾಗೂ ಬೆಳಗಟ್ಟ ಗ್ರಾಮದಲ್ಲಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಹಾಗೂ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುನರ್ ವಸತಿ, ಪುನರ್ ವ್ಯವಸ್ಥೆ ಸಭೆಯಲ್ಲಿ ರೈತರು ಈ ಬೇಡಿಕೆ ಮುಂದಿಟ್ಟರು.</p>.<p>‘ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗೆ ಭೂಮಿ ನೀಡಲು ಸಿದ್ಧರಿದ್ದೇವೆ. ಆದರೆ, ಸರ್ಕಾರ ನೀಡುತ್ತಿರುವ ಪರಿಹಾರ ಸಾಕಾಗುತ್ತಿಲ್ಲ. ಬೆಳೆಗೆ ಸರಿಯಾದ ವಿಮೆ ಕೂಡ ಪಾವತಿಸುತ್ತಿಲ್ಲ. ಇದರಿಂದ ಸಮಸ್ಯೆಗೆ ಸಿಲುಕಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯಿಂದ ಆರಂಭವಾಗುವ ಭದ್ರಾ ಮೇಲ್ದಂಡೆ ನಾಲೆ ಗೋನೂರು, ಕಲ್ಲೇನಹಳ್ಳಿ, ಬೆಳಗಟ್ಟ, ಹಾಯ್ಕಲ್, ಪೇಲೂರಹಟ್ಟಿ ಹಾಗೂ ದ್ಯಾಮವ್ವನಹಳ್ಳಿ ಮೂಲಕ ಚಳ್ಳಕೆರೆ ತಾಲ್ಲೂಕು ಸೇರಲಿದೆ. ಭೂಮಿ ಕಳೆದುಕೊಳ್ಳುತ್ತಿರುವ ರೈತರ ಅಹವಾಲು ಆಲಿಸುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು.</p>.<p>‘ಭೂಮಿ ಪರಿಹಾರ ಹಾಗೂ ಬೆಳೆ ಪರಿಹಾರವನ್ನು ಆದಷ್ಟು ಬೇಗ ನೀಡಲು ಕ್ರಮ ಕೈಗೊಳ್ಳಲಾಗುತ್ತದ’ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಶ್ವಾಸನೆ ನೀಡಿದರು.</p>.<p>ಶಾಸಕ ಟಿ.ರಘುಮೂರ್ತಿ ಮಾತನಾಡಿ, ‘ಮುಂದಿನ ಜನವರಿ ಒಳಗೆ ರೈತರಿಗೆ ನ್ಯಾಯಯುತ ಪರಿಹಾರ ತಲುಪಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಭೂಸ್ವಾಧೀನಾಧಿಕಾರಿ ಹರಿಶಿಲ್ಪ, ತಹಶೀಲ್ದಾರ್ ವೆಂಕಟೇಶಯ್ಯ, ಕಾರ್ಯಪಾಲಕ ಎಂಜಿನಿಯರ್ ಶ್ರೀಧರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಎಸ್.ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಭದ್ರಾ ಮೇಲ್ದಂಡೆ ಯೋಜನೆಯ ನಾಲೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳುತ್ತಿರುವ ಭೂಮಿಗೆ ನಗದು ಪರಿಹಾರದ ಬದಲು ಪರ್ಯಾಯ ಜಮೀನು ನೀಡಿ ಎಂದು ಭೂಮಿ ಕಳೆದುಕೊಳ್ಳುತ್ತಿರುವ ರೈತರು ಸರ್ಕಾರವನ್ನು ಒತ್ತಾಯಿಸಿದರು.</p>.<p>ತಾಲ್ಲೂಕಿನ ಕಲ್ಲೇನಹಳ್ಳಿ ಹಾಗೂ ಬೆಳಗಟ್ಟ ಗ್ರಾಮದಲ್ಲಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಹಾಗೂ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುನರ್ ವಸತಿ, ಪುನರ್ ವ್ಯವಸ್ಥೆ ಸಭೆಯಲ್ಲಿ ರೈತರು ಈ ಬೇಡಿಕೆ ಮುಂದಿಟ್ಟರು.</p>.<p>‘ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗೆ ಭೂಮಿ ನೀಡಲು ಸಿದ್ಧರಿದ್ದೇವೆ. ಆದರೆ, ಸರ್ಕಾರ ನೀಡುತ್ತಿರುವ ಪರಿಹಾರ ಸಾಕಾಗುತ್ತಿಲ್ಲ. ಬೆಳೆಗೆ ಸರಿಯಾದ ವಿಮೆ ಕೂಡ ಪಾವತಿಸುತ್ತಿಲ್ಲ. ಇದರಿಂದ ಸಮಸ್ಯೆಗೆ ಸಿಲುಕಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯಿಂದ ಆರಂಭವಾಗುವ ಭದ್ರಾ ಮೇಲ್ದಂಡೆ ನಾಲೆ ಗೋನೂರು, ಕಲ್ಲೇನಹಳ್ಳಿ, ಬೆಳಗಟ್ಟ, ಹಾಯ್ಕಲ್, ಪೇಲೂರಹಟ್ಟಿ ಹಾಗೂ ದ್ಯಾಮವ್ವನಹಳ್ಳಿ ಮೂಲಕ ಚಳ್ಳಕೆರೆ ತಾಲ್ಲೂಕು ಸೇರಲಿದೆ. ಭೂಮಿ ಕಳೆದುಕೊಳ್ಳುತ್ತಿರುವ ರೈತರ ಅಹವಾಲು ಆಲಿಸುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು.</p>.<p>‘ಭೂಮಿ ಪರಿಹಾರ ಹಾಗೂ ಬೆಳೆ ಪರಿಹಾರವನ್ನು ಆದಷ್ಟು ಬೇಗ ನೀಡಲು ಕ್ರಮ ಕೈಗೊಳ್ಳಲಾಗುತ್ತದ’ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಶ್ವಾಸನೆ ನೀಡಿದರು.</p>.<p>ಶಾಸಕ ಟಿ.ರಘುಮೂರ್ತಿ ಮಾತನಾಡಿ, ‘ಮುಂದಿನ ಜನವರಿ ಒಳಗೆ ರೈತರಿಗೆ ನ್ಯಾಯಯುತ ಪರಿಹಾರ ತಲುಪಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಭೂಸ್ವಾಧೀನಾಧಿಕಾರಿ ಹರಿಶಿಲ್ಪ, ತಹಶೀಲ್ದಾರ್ ವೆಂಕಟೇಶಯ್ಯ, ಕಾರ್ಯಪಾಲಕ ಎಂಜಿನಿಯರ್ ಶ್ರೀಧರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಎಸ್.ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>