ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯವಾಗಿ ಖಾತೆಗೆ ಆಧಾರ್ ಲಿಂಕ್ ಮಾಡಿಸಲು ಸೂಚನೆ

Published 26 ಸೆಪ್ಟೆಂಬರ್ 2023, 2:48 IST
Last Updated 26 ಸೆಪ್ಟೆಂಬರ್ 2023, 2:48 IST
ಅಕ್ಷರ ಗಾತ್ರ

ಮೊಳಕಾಲ್ಮುರು: ವಿವಿಧ ಯೋಜನೆಗಳ ಅಡಿಯಲ್ಲಿ ಸಾಮಾಜಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ ಪಿಂಚಣಿ ಪಡೆಯುತ್ತಿರುವ ಖಾತೆಗಳಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡಿಸಬೇಕು ಎಂದು ಸೂಚಿಸಲಾಗಿದೆ.

ಪ್ರತಿ 10 ವರ್ಷಕ್ಕೆ ಒಮ್ಮೆ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಬೇಕಿದ್ದಲ್ಲಿ ಪಿಂಚಣಿ ಪಡೆಯುವ ಅಂಚೆಕಚೇರಿಯಲ್ಲಿ ಆಧಾರ್ ಬಯೋಮೆಟ್ರಿಕ್ ಮಾಡಿಸಿ ಅಪ್ ಡೇಟ್ ಮಾಡಿಸಬೇಕು. ಇದಕ್ಕೆ ಸೆಪ್ಟೆಂಬರ್ 30 ಕೊನೆ ದಿನವಾಗಿದೆ.

ತಪ್ಪಿದಲ್ಲಿ ಪಿಂಚಣಿ ಸ್ಥಗಿತವಾದಲ್ಲಿ ತಾಲ್ಲೂಕು ಆಡಳಿತ ಹೊಣೆಯಾಗುವುದಿಲ್ಲ. ಮಾಹಿತಿಗೆ ಸಂಬಂಧಪಟ್ಟ ಕಂದಾಯ ನಿರೀಕ್ಷಕರು ಅಥವಾ ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT