ಈಗ ಕೃಷಿ ಕ್ಷೇತ್ರ ಹೆಚ್ಚು ಅಭಿವೃದ್ಧಿ ಹೊಂದಿದೆ. ರೈತರು ತಾಂತ್ರಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುತ್ತಿದ್ದಾರೆ. ಹೊಲ ಹಸನು ಮಾಡುವುದರಿಂದ ಹಿಡಿದು ಬಿತ್ತನೆ, ಕಳೆ ತೆಗೆಯುವುದು, ಔಷಧಿ ಸಿಂಪಡಿಸುವುದು, ಕಟಾವು, ಒಕ್ಕಣೆವರೆಗೆ ಯಂತ್ರಗಳನ್ನು ಬಳಸಲಾಗುತ್ತಿದೆ. ಇದರಿಂದ ಸುಲಭವಾಗಿ ಕೃಷಿ ಮಾಡುವುದರೊಂದಿಗೆ ಹೆಚ್ಚು ಇಳುವರಿ ಪಡೆಯಬಹುದು. ರೈತರು ಬೆಳೆಯ ಪ್ರತಿ ಹಂತದಲ್ಲಿ ಕೃಷಿ ತಜ್ಞರ ಸಲಹೆ ಪಡೆಯಬೇಕು ಎಂದರು.