ಲಸಿಕೆ ಖಾಲಿಯಾಗಿದ್ದು ಮತ್ತೆ ಬಂದಿಲ್ಲ ಎಂಬ ಸುದ್ದಿ ತಿಳಿಯುತ್ತಿದಂತೆ ಬೇಸರದಿಂದ ತಮ್ಮ ಮನೆಗಳತ್ತ ಮರಳಿದರು. ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಇಂತಹ ಸಂದರ್ಭದಲ್ಲಿ ತಾಲ್ಲೂಕಿನ ಜನರಿಗೆ ಸಾಕಾಗುವಷ್ಟು ಲಸಿಕೆ ದಾಸ್ತಾನು ಮಾಡಿಕೊಳ್ಳಲು ಆರೋಗ್ಯ ಇಲಾಖೆ ಕಾಳಜಿ ವಹಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.