<p><strong>ಚಳ್ಳಕೆರೆ:</strong> ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ಸೋಮವಾರ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.</p>.<p>ಶಾಸಕ ಟಿ.ರಘುಮೂರ್ತಿ, ವಾಲ್ಮೀಕಿ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ‘ವಾಲ್ಮೀಕಿ ರಾಮಾಯಣ ಮಾನವ ಬದುಕಿನ ವಿಕಾಸದ ಚರಿತ್ರೆಯಾಗಿದೆ. ಜಗತ್ತಿಗೆ ಶ್ರೇಷ್ಠ ಕಾವ್ಯವನ್ನು ನೀಡಿದ ವಾಲ್ಮೀಕಿ ಬಲು ದೊಡ್ಡ ಸಂಸ್ಕೃತಿಯನ್ನು ಸೃಷ್ಟಿಸಿದ್ದಾರೆ. ಎಲ್ಲರೂ ವಾಲ್ಮೀಕಿ ರಾಮಾಯಣವನ್ನು ಅಧ್ಯಯನ ಮಾಡಬೇಕು. ಅವರು ನೀಡಿರುವ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು. </p>.<p>‘ರಾಮಾಯಣ ಮಹಾಕಾವ್ಯದ ಮೂಲಕ ವಾಲ್ಮೀಕಿ ಮಹಾಕವಿಯು ಇಡೀ ಜಗತ್ತಿಗೆ ಸ್ವಾತಂತ್ರ್ಯ, ಸಮಾನತೆ ಹಾಗೂ ಸೋದರತೆಯ ಸಂದೇಶ ನೀಡಿದ್ದಾರೆ. ವಾಲ್ಮೀಕಿ ತತ್ವಜ್ಞಾನಿಯಾಗಿ, ಮಾನವೀಯ ಮೌಲ್ಯಗಳ ಹರಿಕಾರನಾಗಿ ಕಾಣುತ್ತಾರೆ. ಇವರ ಜೀವನವೇ ಪ್ರಗತಿಯ ಹಾದಿಯಲ್ಲಿ ಹಾಗೂ ಅರಿವಿನ ಮಾರ್ಗದಲ್ಲಿ ಸಾಗಿದೆ’ ಎಂದರು.</p>.<p>ಹಲವು ಬಗೆಯ ಹೂವುಗಳಿಂದ ಅಲಂಕರಿಸಿದ ವಾಲ್ಮೀಕಿ ಭಾವಚಿತ್ರವನ್ನು ತಮಟೆ, ಉರುಮೆ, ಡ್ರಮ್ಸೆಟ್, ಡೊಳ್ಳು ಮುಂತಾದ ಜನಪದ ವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಸಾರೋಟದ ಮೂಲಕ ಮೆರವಣಿಗೆ ನಡೆಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರೇಶ್, ಸದಸ್ಯ ನಾಗಭೂಷಣ, ಜಗಲೂರಸ್ವಾಮಿ, ರವಿ, ಓಬಳೇಶ್, ನಿಜಲಿಂಗಪ್ಪ, ಪ್ರಕಾಶ್, ಗ್ರಾಮದ ಮುಖಂಡ ವಾಲ್ಮೀಕಿ, ರಮೇಶ್, ಕೃಷ್ಣಪ್ಪ, ಚಿತ್ತಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ಸೋಮವಾರ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.</p>.<p>ಶಾಸಕ ಟಿ.ರಘುಮೂರ್ತಿ, ವಾಲ್ಮೀಕಿ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ‘ವಾಲ್ಮೀಕಿ ರಾಮಾಯಣ ಮಾನವ ಬದುಕಿನ ವಿಕಾಸದ ಚರಿತ್ರೆಯಾಗಿದೆ. ಜಗತ್ತಿಗೆ ಶ್ರೇಷ್ಠ ಕಾವ್ಯವನ್ನು ನೀಡಿದ ವಾಲ್ಮೀಕಿ ಬಲು ದೊಡ್ಡ ಸಂಸ್ಕೃತಿಯನ್ನು ಸೃಷ್ಟಿಸಿದ್ದಾರೆ. ಎಲ್ಲರೂ ವಾಲ್ಮೀಕಿ ರಾಮಾಯಣವನ್ನು ಅಧ್ಯಯನ ಮಾಡಬೇಕು. ಅವರು ನೀಡಿರುವ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು. </p>.<p>‘ರಾಮಾಯಣ ಮಹಾಕಾವ್ಯದ ಮೂಲಕ ವಾಲ್ಮೀಕಿ ಮಹಾಕವಿಯು ಇಡೀ ಜಗತ್ತಿಗೆ ಸ್ವಾತಂತ್ರ್ಯ, ಸಮಾನತೆ ಹಾಗೂ ಸೋದರತೆಯ ಸಂದೇಶ ನೀಡಿದ್ದಾರೆ. ವಾಲ್ಮೀಕಿ ತತ್ವಜ್ಞಾನಿಯಾಗಿ, ಮಾನವೀಯ ಮೌಲ್ಯಗಳ ಹರಿಕಾರನಾಗಿ ಕಾಣುತ್ತಾರೆ. ಇವರ ಜೀವನವೇ ಪ್ರಗತಿಯ ಹಾದಿಯಲ್ಲಿ ಹಾಗೂ ಅರಿವಿನ ಮಾರ್ಗದಲ್ಲಿ ಸಾಗಿದೆ’ ಎಂದರು.</p>.<p>ಹಲವು ಬಗೆಯ ಹೂವುಗಳಿಂದ ಅಲಂಕರಿಸಿದ ವಾಲ್ಮೀಕಿ ಭಾವಚಿತ್ರವನ್ನು ತಮಟೆ, ಉರುಮೆ, ಡ್ರಮ್ಸೆಟ್, ಡೊಳ್ಳು ಮುಂತಾದ ಜನಪದ ವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಸಾರೋಟದ ಮೂಲಕ ಮೆರವಣಿಗೆ ನಡೆಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರೇಶ್, ಸದಸ್ಯ ನಾಗಭೂಷಣ, ಜಗಲೂರಸ್ವಾಮಿ, ರವಿ, ಓಬಳೇಶ್, ನಿಜಲಿಂಗಪ್ಪ, ಪ್ರಕಾಶ್, ಗ್ರಾಮದ ಮುಖಂಡ ವಾಲ್ಮೀಕಿ, ರಮೇಶ್, ಕೃಷ್ಣಪ್ಪ, ಚಿತ್ತಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>