‘ಶಾಸಕ ಬಿ.ಜಿ. ಗೋವಿಂದಪ್ಪ ವಾಣಿ ವಿಲಾಸ ಹಿನ್ನೀರಿನಿಂದ ತೊಂದರೆಯಾಗುವ ಜನರಿಗೆ ಬೇರೆ ಕಡೆ ಸರ್ಕಾರಿ ಭೂಮಿ ಕೊಡಿಸಲಿ. ಆಧುನಿಕ ತಂತ್ರಜ್ಞಾನ ಬಳಸಿ ಹಿನ್ನೀರಿನಿಂದ ಅವರಿಗೆ ರಕ್ಷಣೆ ದೊರೆಯುವಂತೆ ತಡೆಗೋಡೆ ನಿರ್ಮಿಸಲಿ. ಅದನ್ನು ಬಿಟ್ಟು ಅಣೆಕಟ್ಟೆಯ ಮೂಲ ಸ್ವರೂಪಕ್ಕೆ ಧಕ್ಕೆ ತರುವಂತಹ ಕಾರ್ಯಕ್ಕೆ ಮುಂದಾದರೆ ಜಲಾಶಯದ ನೀರನ್ನೇ ನಂಬಿರುವ ಜಿಲ್ಲೆಯ ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮುರು, ಹೊಳಲ್ಕೆರೆ ತಾಲ್ಲೂಕಿನ ಜನರು ಸಮಸ್ಯೆ ಎದುರಿಸಬೇಕಾಗುತ್ತದೆ. ಈ ಬಗ್ಗೆ ಗಮನಹರಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.