<p><strong>ಚಿತ್ರದುರ್ಗ: </strong>‘ನಾಡು, ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಅನೇಕ ದಾರ್ಶನಿಕರಂತೆಯೇ ಜನಸೇವೆಯಲ್ಲಿ ತೊಡಗಿದ ಮಹಾಯೋಗಿ ವೇಮನ ಶ್ರೇಷ್ಠರಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮಂಗಳವಾರ ಸರಳವಾಗಿ ಆಯೋಜಿಸಿದ್ದ ‘ಮಹಾಯೋಗಿ ವೇಮನ’ ಜಯಂತಿ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.</p>.<p>‘ವೇಮನರು ಸಮಾಜದ ಒಳಿತಿಗಾಗಿ ವೈಭೋಗ ಜೀವನವನ್ನೇ ತ್ಯಾಗ ಮಾಡಿದ ಮಹಾನ್ ದಾರ್ಶನಿಕ. ಉತ್ತಮ ಮಾರ್ಗದಲ್ಲಿ ನಡೆಯಲು, ಬದುಕಿನುದ್ದಕ್ಕೂ ಸರಳತೆಯಿಂದ ಜೀವಿಸಲು ಇಂತಹ ಅನೇಕ ಮಹನೀಯರು ದಾರಿದೀಪ ಆಗಿದ್ದಾರೆ. ಹಿರಿಯರ ಮಾರ್ಗದರ್ಶನದಿಂದ ಭವಿಷ್ಯದಲ್ಲಿ ಸಾಕ್ಷಾತ್ಕಾರ ಪಡೆಯಲು ಸಾಧ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ‘ಸಮಾಜದ ಅಂಕು-ಡೊಂಕು ತಿದ್ದುವ ಮೂಲಕ ವೇಮನರು ಜನರಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಸದುದ್ದೇಶಕ್ಕಾಗಿ ದುಡಿದ ಕಾರಣದಿಂದಲೇ ಮಹನೀಯರಾಗಿದ್ದಾರೆ. ಇಂಥವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಉಪವಿಭಾಗಾಧಿಕಾರಿ ಡಾ.ನಾಗರಾಜ್, ಡಿಡಿಪಿಐ ರವಿಶಂಕರ್ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ರೆಡ್ಡಿ ಸಮುದಾಯದ ಕಾರ್ಯದರ್ಶಿ ಜಯರಾಂರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ನಾಡು, ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಅನೇಕ ದಾರ್ಶನಿಕರಂತೆಯೇ ಜನಸೇವೆಯಲ್ಲಿ ತೊಡಗಿದ ಮಹಾಯೋಗಿ ವೇಮನ ಶ್ರೇಷ್ಠರಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮಂಗಳವಾರ ಸರಳವಾಗಿ ಆಯೋಜಿಸಿದ್ದ ‘ಮಹಾಯೋಗಿ ವೇಮನ’ ಜಯಂತಿ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.</p>.<p>‘ವೇಮನರು ಸಮಾಜದ ಒಳಿತಿಗಾಗಿ ವೈಭೋಗ ಜೀವನವನ್ನೇ ತ್ಯಾಗ ಮಾಡಿದ ಮಹಾನ್ ದಾರ್ಶನಿಕ. ಉತ್ತಮ ಮಾರ್ಗದಲ್ಲಿ ನಡೆಯಲು, ಬದುಕಿನುದ್ದಕ್ಕೂ ಸರಳತೆಯಿಂದ ಜೀವಿಸಲು ಇಂತಹ ಅನೇಕ ಮಹನೀಯರು ದಾರಿದೀಪ ಆಗಿದ್ದಾರೆ. ಹಿರಿಯರ ಮಾರ್ಗದರ್ಶನದಿಂದ ಭವಿಷ್ಯದಲ್ಲಿ ಸಾಕ್ಷಾತ್ಕಾರ ಪಡೆಯಲು ಸಾಧ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ‘ಸಮಾಜದ ಅಂಕು-ಡೊಂಕು ತಿದ್ದುವ ಮೂಲಕ ವೇಮನರು ಜನರಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಸದುದ್ದೇಶಕ್ಕಾಗಿ ದುಡಿದ ಕಾರಣದಿಂದಲೇ ಮಹನೀಯರಾಗಿದ್ದಾರೆ. ಇಂಥವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಉಪವಿಭಾಗಾಧಿಕಾರಿ ಡಾ.ನಾಗರಾಜ್, ಡಿಡಿಪಿಐ ರವಿಶಂಕರ್ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ರೆಡ್ಡಿ ಸಮುದಾಯದ ಕಾರ್ಯದರ್ಶಿ ಜಯರಾಂರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>