‘ಜುಲೈ 28ರಂದು ಟಿ.ವಿ ನೋಡುವ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ಶುರುವಾಗಿದೆ. ಪತ್ನಿಯ ಕೆನ್ನೆಗೆ ಚಂದ್ರಪ್ಪ ಬಲವಾಗಿ ಹೊಡೆದಿದ್ದಾನೆ. ಪ್ರಜ್ಞೆ ತಪ್ಪಿದ ಬಳಿಕ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವಂತೆ ಬಿಂಬಿಸಲು ಪ್ರಯತ್ನಿಸಿದ್ದಾನೆ. ಮೂಗು ಹಾಗೂ ಬಾಯಿಯಲ್ಲಿ ರಕ್ತ ಸುರಿದಿದ್ದರಿಂದ ಅನುಮಾನಗೊಂಡ ಉಮಾ ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದಾಗ ಚಂದ್ರಪ್ಪ ತಪ್ಪೊಪ್ಪಿಕೊಂಡಿದ್ದಾನೆ’ ಎಂದರು.