ಅಲ್ಲಿಂದ ಮರುಘಾ ಮಠಕ್ಕೆ ಭೇಟಿ ನೀಡಿದ್ದಾರೆ. ಅದಾಗಲೇ ಜಿಲ್ಲೆಯ ಹಲವು ಮಠಾಧೀಶರು ಇಲ್ಲಿ ಸೇರಿದ್ದರು. ಶಿವಮೂರ್ತಿ ಮುರುಘಾ ಶರಣರು, ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಡಿವಾಳ ಮಾಚಿದೇವ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ ಅವರೊಂದಿಗೆ ಹೋಳಿಗೆ, ಸೀಕರಣೆ ಊಟ ಸೇವಿಸಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು ಎಂದು ತಿಳಿದುಬಂದಿದೆ.