<p><strong>ಹಿರಿಯೂರು</strong>:ತಾಲ್ಲೂಕಿನ ಗೊಲ್ಲಹಳ್ಳಿಯ ನಿವಾಸಿ, ಬೆಂಗಳೂರಿನ ವಿಕಾಸಸೌಧದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ವಿಭಾಗದ ಕೇಸ್ ವರ್ಕರ್ ಆಗಿರುವ 44 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ಬುಧವಾರ ದೃಢಪಟ್ಟಿದೆ. ಇದರೊಂದಿಗೆ ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ 26ಕ್ಕೇರಿದೆ.</p>.<p>ಜುಲೈ 7ರಂದು ಬೆಂಗಳೂರಿನಿಂದ ಗೊಲ್ಲಹಳ್ಳಿಗೆ ಬಂದಿದ್ದ ಸೋಂಕಿತ, ಕೋವಿಡ್–19 ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಅಂದು ಸಂಜೆಯೇ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಿಗ್ಗೆಬಂದಿರುವ ವರದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.</p>.<p>‘ಸೋಂಕಿತರ 62 ವರ್ಷದ ತಾಯಿ, 12 ಮತ್ತು 8 ವರ್ಷದ ಮಕ್ಕಳಿಬ್ಬರ ಸ್ವ್ಯಾಬ್ ಅನ್ನು ಸಂಗ್ರಹಿಸಲಾಗಿದ್ದು, ವರದಿ ಬರಬೇಕಿದೆ. ಬುಧವಾರ 31 ವರ್ಷದ ಪತ್ನಿ, 36 ವರ್ಷದ ಸಹೋದರ, 35 ವರ್ಷದ ಸಹೋದರನ ಪತ್ನಿ ಹಾಗೂ 10 ವರ್ಷದ ಅವರ ಮಗನ ಸ್ವ್ಯಾಬ್ ಸಂಗ್ರಹಿಸಿದ್ದೇವೆ’ ಎಂದು ಡಾ. ವೆಂಕಟೇಶ್ ತಿಳಿಸಿದ್ದಾರೆ.</p>.<p>ಸೋಂಕಿತ ವ್ಯಕ್ತಿ ಬೆಂಗಳೂರಿನ ಯಲಹಂಕ ಸಮೀಪದ ಲಕ್ಷ್ಮಯ್ಯ ಗಾರ್ಡನ್ ಬಡಾವಣೆಯಲ್ಲಿ ನೆಲೆಸಿದ್ದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>:ತಾಲ್ಲೂಕಿನ ಗೊಲ್ಲಹಳ್ಳಿಯ ನಿವಾಸಿ, ಬೆಂಗಳೂರಿನ ವಿಕಾಸಸೌಧದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ವಿಭಾಗದ ಕೇಸ್ ವರ್ಕರ್ ಆಗಿರುವ 44 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ಬುಧವಾರ ದೃಢಪಟ್ಟಿದೆ. ಇದರೊಂದಿಗೆ ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ 26ಕ್ಕೇರಿದೆ.</p>.<p>ಜುಲೈ 7ರಂದು ಬೆಂಗಳೂರಿನಿಂದ ಗೊಲ್ಲಹಳ್ಳಿಗೆ ಬಂದಿದ್ದ ಸೋಂಕಿತ, ಕೋವಿಡ್–19 ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಅಂದು ಸಂಜೆಯೇ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಿಗ್ಗೆಬಂದಿರುವ ವರದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.</p>.<p>‘ಸೋಂಕಿತರ 62 ವರ್ಷದ ತಾಯಿ, 12 ಮತ್ತು 8 ವರ್ಷದ ಮಕ್ಕಳಿಬ್ಬರ ಸ್ವ್ಯಾಬ್ ಅನ್ನು ಸಂಗ್ರಹಿಸಲಾಗಿದ್ದು, ವರದಿ ಬರಬೇಕಿದೆ. ಬುಧವಾರ 31 ವರ್ಷದ ಪತ್ನಿ, 36 ವರ್ಷದ ಸಹೋದರ, 35 ವರ್ಷದ ಸಹೋದರನ ಪತ್ನಿ ಹಾಗೂ 10 ವರ್ಷದ ಅವರ ಮಗನ ಸ್ವ್ಯಾಬ್ ಸಂಗ್ರಹಿಸಿದ್ದೇವೆ’ ಎಂದು ಡಾ. ವೆಂಕಟೇಶ್ ತಿಳಿಸಿದ್ದಾರೆ.</p>.<p>ಸೋಂಕಿತ ವ್ಯಕ್ತಿ ಬೆಂಗಳೂರಿನ ಯಲಹಂಕ ಸಮೀಪದ ಲಕ್ಷ್ಮಯ್ಯ ಗಾರ್ಡನ್ ಬಡಾವಣೆಯಲ್ಲಿ ನೆಲೆಸಿದ್ದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>