‘ಇದು ಕಾಟಾಚಾರದ ಕಾಮಗಾರಿಯಾಗಿದೆ. ಸಂಸದರು, ಶಾಸಕರು ಹಾಗೂ ಸಂಬಂಧ ಪಟ್ಟ ಇಲಾಖೆಯ ಎಂಜಿನಿಯರ್ಗಳು ಸ್ಥಳ ಪರಿಶೀಲನೆ ನಡೆಸಿ, ಉತ್ತಮ ರಸ್ತೆ ನಿರ್ಮಿಸಿಕೊಡಬೇಕು. ಇಲ್ಲದಿದ್ದರೆ ಕಾಮಗಾರಿ ಮಾಡಲು ಬಿಡುವುದಿಲ್ಲ’ ಎಂದು ಆಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಆರ್.ಹರ್ಷ, ಪ್ರದೀಪ್, ಕೆಂಚಪ್ಪ, ಜಗದೀಶ್, ರಾಜಣ್ಣ, ಹನುಮನಕಟ್ಟೆ, ಕೇಶವಾಪುರ, ಬಿಜ್ಜೆನಾಳ್, ಕಾಶಿಪುರ, ಅರಸನಘಟ್ಟ, ಅಮೃತಾಪುರ ಮೊದಲಾದ ಗ್ರಾಮಸ್ಥರು ಎಚ್ಚರಿಸಿದ್ದಾರೆ.