ಸಮಾರಂಭದ ನಂತರ ವಿಠಲ ರುಕ್ಮಿಣಿ ದೇವರುಗಳನ್ನು ಬೆಳ್ಳಿರಥದಲ್ಲಿ ಪ್ರತಿಷ್ಠಾಪಿಸಿ, ಸಾಮೂಹಿಕ ಭಜನೆಯೊಂದಿಗೆ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಸಾಗಿ ಬಂದ ದಾರಿಯಲ್ಲಿನ ಭಕ್ತರು ವಿಠ್ಠಲ ರುಕ್ಮಿಣಿ ದೇವರಿಗೆ ಪೂಜೆ ಸಲ್ಲಿಸಿದರು. ಮೆರವಣಿಗೆ ನಂತರ ದೇವಾಲಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜಾ ಕಾರ್ಯಕ್ರಮ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು.