ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲುವೆಯ ಹೂಳು ಎತ್ತಿಸಿ- ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಸೂಚನೆ

Last Updated 21 ಡಿಸೆಂಬರ್ 2021, 13:13 IST
ಅಕ್ಷರ ಗಾತ್ರ

ಚಿತ್ರದುರ್ಗ: ಭದ್ರ ಜಲಾಶಯದಿಂದ ವಿ.ವಿ.ಸಾಗರಕ್ಕೆ ನೀರು ಹರಿಸುವ ಕಾಲುವೆಯಲ್ಲಿರುವ ಹೂಳನ್ನು ತೆಗೆಸಿ ಜನವರಿ ವರೆಗೆ ನೀರು ಹರಿಸಬೇಕು ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಸೂಚಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಎಂಜಿನಿಯರ್‌ ರಾಘವನ್‌ ಅವರೊಂದಿಗೆ ಮಾತನಾಡಿದ ಶಾಸಕರು, ‘ವಿ.ವಿ.ಸಾಗರ ಭರ್ತಿಯಾಗಲು ಇನ್ನು ಐದು ಅಡಿಗಳು ಬಾಕಿ ಇವೆ. ಭದ್ರಾ ಜಲಾಶಯದ ನೀರು ಹರಿದರೆ ವಿ.ವಿ.ಸಾಗರ ಕೋಡಿ ಬೀಳುತ್ತದೆ. ಈ ಗತವೈಭವವನ್ನು ಕಣ್ತುಂಬಿಕೊಳ್ಳಲು ಜಿಲ್ಲೆಯ ರೈತರು ಕಾಯುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಾಲುವೆಯಲ್ಲಿ ಹೂಳು ತುಂಬಿಕೊಂಡಿದೆ. ಭದ್ರಾ ಜಲಾಶಯದ ನೀರು ವಿ.ವಿ.ಸಾಗರಕ್ಕೆ ಹರಿದು ಬರುಲು ಇದು ಅಡ್ಡಿಯಾಗಿದೆ. ಹೂಳು ಎತ್ತಿಸಿದರೆ ಜಿಲ್ಲೆಗೆ ನೀರು ಹರಿದು ಬರಲಿದೆ. ಇದರಿಂದ ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ’ ಎಂದಿದ್ದಾರೆ.

‘ವಿ.ವಿ.ಸಾಗರ ಹಲವು ದಶಕಗಳ ಹಿಂದೆ ಕೋಡಿ ಬಿದ್ದಿತ್ತು. ಜನವರಿ ತಿಂಗಳವರೆಗೆ ಭದ್ರಾ ನೀರು ಹರಿಸಲು ಸರ್ಕಾರ ಅನುಮತಿ ನೀಡಿದೆ. ನಿಗದಿತ ಪ್ರಮಾಣದ ನೀರು ಹರಿದುಬಂದರೆ ವಿ.ವಿ.ಸಾಗರದ ಇತಿಹಾಸ ಮರುಕಳುಹಿಸಲಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT