<p><strong>ಚಿತ್ರದುರ್ಗ: </strong>ನಾಲ್ಕು ದಶಕದವರೆಗೂ ಜಿಲ್ಲೆಯ ಅಭಿವೃದ್ಧಿ ವಿಚಾರದ ಹೋರಾಟಗಳಲ್ಲಿ ಮುರುಘಾರಾಜೇಂದ್ರ ಒಡೆಯರ್ ಸದಾ ಬದ್ಧರಾಗಿದ್ದರು ಎಂದು ಚಿಂತಕ ಯಾದವರೆಡ್ಡಿ ಹೇಳಿದರು.</p>.<p>ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಮುರುಘಾರಾಜೇಂದ್ರ ಒಡೆಯರ್ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭದ್ರಾ ಮೇಲ್ದಂಡೆ, ನೇರ ರೈಲು ಮಾರ್ಗ, ವೈದ್ಯಕೀಯ ಕಾಲೇಜು ಸೇರಿ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ’ ಎಂದು ಸ್ಮರಿಸಿಕೊಂಡರು.</p>.<p>‘ಜಿಲ್ಲೆಯನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಸ್ಥಳೀಯ ರಾಜಕಾರಣ ನಿತ್ರಾಣಗೊಂಡಿದೆ. ಅದಕ್ಕಾಗಿ ಯುವಸಮೂಹ ನಾಯಕತ್ವ ಬೆಳೆಸಿಕೊಳ್ಳಬೇಕಿದೆ. ಹೋರಾಟಗಳನ್ನೇ ಹತ್ತಿಕ್ಕುವಂಥ ಪ್ರಸ್ತುತ ದಿನಗಳಲ್ಲಿ ತಪ್ಪು ನಿರ್ಧಾರಗಳನ್ನು ಖಂಡಿಸುವ, ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.</p>.<p>ವಕೀಲ ಬಿ.ಕೆ.ರಹಮತ್ ಉಲ್ಲಾ, ‘ಹೋರಾಟಕ್ಕೆ ಒಡೆಯರ್ ಸ್ಫೂರ್ತಿಯಾಗಿದ್ದಾರೆ. ಹಿಂದುಳಿದ, ಶೋಷಿತ, ಅಲ್ಪಸಂಖ್ಯಾತರ ಮೇಲೆ ಎಲ್ಲಿಯೇ ದೌರ್ಜನ್ಯ, ಅನ್ಯಾಯವಾದರೂ ಸಹಿಸುತ್ತಿರಲಿಲ್ಲ. ಹೋರಾಟಕ್ಕೆ ಮುಂದಾಗುತ್ತಿದ್ದರು’ ಎಂದು ನೆನಪಿಸಿಕೊಂಡರು.</p>.<p>ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಫಾದರ್ ಎಂ.ಎಸ್.ರಾಜು, ಹೋರಾಟಗಾರ್ತಿ ಜಯಲಕ್ಷ್ಮಿ, ವಿಮುಕ್ತಿ ವಿದ್ಯಾಸಂಸ್ಥೆಯ ಆರ್. ವಿಶ್ವಸಾಗರ್, ಕುಂಚಿಗನಹಾಳ್ ಮಹಾಲಿಂಗಪ್ಪ, ವೈ.ಕುಮಾರ್, ಕೆ.ಎಂ. ನಾಗರಾಜ್, ನರೇನಹಳ್ಳಿ ಅರುಣ್ಕುಮಾರ್, ಲಿಂಗರಾಜು, ಫೈಲ್ವಾನ್ ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ನಾಲ್ಕು ದಶಕದವರೆಗೂ ಜಿಲ್ಲೆಯ ಅಭಿವೃದ್ಧಿ ವಿಚಾರದ ಹೋರಾಟಗಳಲ್ಲಿ ಮುರುಘಾರಾಜೇಂದ್ರ ಒಡೆಯರ್ ಸದಾ ಬದ್ಧರಾಗಿದ್ದರು ಎಂದು ಚಿಂತಕ ಯಾದವರೆಡ್ಡಿ ಹೇಳಿದರು.</p>.<p>ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಮುರುಘಾರಾಜೇಂದ್ರ ಒಡೆಯರ್ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭದ್ರಾ ಮೇಲ್ದಂಡೆ, ನೇರ ರೈಲು ಮಾರ್ಗ, ವೈದ್ಯಕೀಯ ಕಾಲೇಜು ಸೇರಿ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ’ ಎಂದು ಸ್ಮರಿಸಿಕೊಂಡರು.</p>.<p>‘ಜಿಲ್ಲೆಯನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಸ್ಥಳೀಯ ರಾಜಕಾರಣ ನಿತ್ರಾಣಗೊಂಡಿದೆ. ಅದಕ್ಕಾಗಿ ಯುವಸಮೂಹ ನಾಯಕತ್ವ ಬೆಳೆಸಿಕೊಳ್ಳಬೇಕಿದೆ. ಹೋರಾಟಗಳನ್ನೇ ಹತ್ತಿಕ್ಕುವಂಥ ಪ್ರಸ್ತುತ ದಿನಗಳಲ್ಲಿ ತಪ್ಪು ನಿರ್ಧಾರಗಳನ್ನು ಖಂಡಿಸುವ, ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ’ ಎಂದು ಸಲಹೆ ನೀಡಿದರು.</p>.<p>ವಕೀಲ ಬಿ.ಕೆ.ರಹಮತ್ ಉಲ್ಲಾ, ‘ಹೋರಾಟಕ್ಕೆ ಒಡೆಯರ್ ಸ್ಫೂರ್ತಿಯಾಗಿದ್ದಾರೆ. ಹಿಂದುಳಿದ, ಶೋಷಿತ, ಅಲ್ಪಸಂಖ್ಯಾತರ ಮೇಲೆ ಎಲ್ಲಿಯೇ ದೌರ್ಜನ್ಯ, ಅನ್ಯಾಯವಾದರೂ ಸಹಿಸುತ್ತಿರಲಿಲ್ಲ. ಹೋರಾಟಕ್ಕೆ ಮುಂದಾಗುತ್ತಿದ್ದರು’ ಎಂದು ನೆನಪಿಸಿಕೊಂಡರು.</p>.<p>ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಫಾದರ್ ಎಂ.ಎಸ್.ರಾಜು, ಹೋರಾಟಗಾರ್ತಿ ಜಯಲಕ್ಷ್ಮಿ, ವಿಮುಕ್ತಿ ವಿದ್ಯಾಸಂಸ್ಥೆಯ ಆರ್. ವಿಶ್ವಸಾಗರ್, ಕುಂಚಿಗನಹಾಳ್ ಮಹಾಲಿಂಗಪ್ಪ, ವೈ.ಕುಮಾರ್, ಕೆ.ಎಂ. ನಾಗರಾಜ್, ನರೇನಹಳ್ಳಿ ಅರುಣ್ಕುಮಾರ್, ಲಿಂಗರಾಜು, ಫೈಲ್ವಾನ್ ತಿಪ್ಪೇಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>