ಶಾಸಕ ಗೂಳಿಹಟ್ಟಿ ಡಿ.ಶೇಖರ್ ಭದ್ರಾ ಮೇಲ್ದಂಡೆ ಯೋಜನೆಯ ಎಂಜಿನಿಯರ್, ಪೊಲೀಸ್ ಇಲಾಖೆ ಹಾಗೂ ಪುರಸಭೆಯ ಅಧಿಕಾರಿ ಸಂಯುಕ್ತ ಆಶ್ರಯದಲ್ಲಿ ಕೊರಟಿಕೆರೆ, ಬಲ್ಲಾಳಸಮುದ್ರ ಸೇರಿ ಸಮೀಪದ ಇನ್ನಿತರ ಗ್ರಾಮದ ಜನರ ಮನವೊಲಿಸಿ ನೀರು ಬಿಡಿಸಿದ್ದಾರೆ. ಶಾಸಕರ ಕಾರ್ಯಕ್ಕೆ ಪಟ್ಟಣದ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಈ ನೀರು ಎಷ್ಟು ದಿನ ಹರಿದು ಬರುತ್ತದೆಯೋ ಗೊತ್ತಿಲ್ಲ. ಹಾಗಾಗಿ ಕುಡಿಯುವ ನೀರಿಗೆ ಶಾಶ್ವತ ಪರಿಹಾರದ ಯೋಜನೆ ರೂಪಿಸಬೇಕು ಎಂಬುದು ಸಾರ್ವಜನಿಕರಮನವಿಯಾಗಿದೆ.