ಬೇಸಿಗೆ ಸಮೀಪಿಸುತ್ತಿರುವುದರಿಂದ ರೈತರ ಬೆಳೆಗಳಾದ ಮೆಕ್ಕೆಜೋಳ, ತೆಂಗು, ತೋಟಗಾರಿಕಾ ಬೆಳೆಗಳಿಗೆ ನೀರಿನ ಅವಶ್ಯಕತೆ ಇರುವುದರಿಂದ ಮೂರು ಬಾರಿ ನೀರು ಹರಿಸಲು ನಿರ್ಧರಿಸಲಾಗಿದೆ. ಇದರಿಂದ ತಾಲ್ಲೂಕಿನ 12,155 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸಲಾಗುವುದು. ಪ್ರಸ್ತುತ ಡ್ಯಾಂನಲ್ಲಿ 129.95 ಅಡಿ ನೀರು ಇರುವುದರಿಂದ ರೈತರು ಸಂತೋಷವಾಗಿದ್ದಾರೆ.