ಚಿತ್ರದುರ್ಗ: ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಯ ಅನೇಕ ಗ್ರಾಮಸ್ಥರು ಈ ಹಿಂದೆ ಖಾಲಿ ಕೊಡ ಪ್ರದರ್ಶಿಸುವ ಮೂಲಕ ಜಿಲ್ಲಾಧಿಕಾರಿ ಕಚೇರಿ, ಪಂಚಾಯಿತಿ ಮುಂಭಾಗ ಪ್ರತಿಭಟಿಸಿದ್ದರು. ಆದರೆ, ಬುಧವಾರ ಜಾನುಕೊಂಡ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಕಾರ್ಯದರ್ಶಿ, ಪಿಡಿಒರನ್ನು ಕಚೇರಿಯೊಳಗೆ ಕೂಡಿ ಹಾಕಿ ಪ್ರತಿಭಟಿಸಿದರು.