ಮಾರಾಟ ಮಾಡಲು ಮನವಿ: ‘ಹುಲಿಕುಂಟೆ, ರಾಮಜೋಗಿಹಳ್ಳಿ, ಬುಕ್ಕಂಬೂದಿ, ಪುರ್ಲೆಹಳ್ಳಿ, ಸಾಣಿಕೆರೆ, ಜಾಜೂರು, ತಳಕು ಮುಂತಾದ ಗ್ರಾಮದಲ್ಲಿ ಕಲ್ಲಂಗಡಿ 160 ಹಾಗೂ ಕರಬೂಜ 80 ಹೆಕ್ಟೇರ್ ಸೇರಿ ತಾಲ್ಲೂಕಿನಲ್ಲಿ ಒಟ್ಟು 240 ಹೆಕ್ಟೇರ್ ಪ್ರದೇಶದಲ್ಲಿ ಹಣ್ಣುಗಳನ್ನು ಉತ್ತಮವಾಗಿ ಬೆಳೆಯಲಾಗಿದೆ. ಈಗ ಕೊರೊನಾ ಎರಡನೇ ಅಲೆ ವ್ಯಾಪಿಸಿದೆ. ಲಾಕ್ಡೌನ್ ಮಾದರಿಯ ನಿರ್ಬಂಧ 3-4 ತಿಂಗಳು ಮುಂದುವರಿಯುವ ಸಾಧ್ಯತೆ ಇದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಿದ್ದರೆ ತೊಂದರೆಯಾಗುತ್ತದೆ. ಹಾಗಾಗಿ ಫಲಕ್ಕೆ ಬಂದ ಬೆಳೆಯನ್ನು ಕೂಡಲೇ ಕಟಾವ್ ಮಾಡಿ ಸ್ಥಳೀಯವಾಗಿ ಮಾರಾಟ ಮಾಡಬೇಕು’ ಎಂದು ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಡಾ. ವಿರೂಪಾಕ್ಷಪ್ಪ ತಿಳಿಸಿದ್ದಾರೆ.