ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಮಾತನಾಡಿ, ‘ಮಾಸ್ಕ್ ಬಗ್ಗೆ ಅರಿವಿನ ಕೊರತೆ ಇದೆ. ಅನೇಕರು ಒತ್ತಾಯಕ್ಕೆ ಬಟ್ಟೆ ಕಟ್ಟಿಕೊಳ್ಳುತ್ತಾರೆ ಹೊರತು ರಕ್ಷಣೆಯತ್ತ ಗಮನ ಹರಿಸುತ್ತಿಲ್ಲ. ಬೇರೊಬ್ಬರೊಂದಿಗೆ ಮಾತನಾಡುವಾಗ ಮಾಸ್ಕ್ ತೆಗೆಯುವುದು ತಪ್ಪು. ಮಾರುಕಟ್ಟೆಗೆ ಬರುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು. ಅಂತರದ ಬಗ್ಗೆ ಎಚ್ಚರ ಇರಬೇಕು’ ಎಂದು ಕಿವಿಮಾತು ಹೇಳಿದರು.