<p><strong>ಮೊಳಕಾಲ್ಮುರು</strong>: ರಾಜ್ಯದಲ್ಲಿ ನೇಕಾರ ಸಮುದಾಯದ ಅಂದಾಜು 50 ಲಕ್ಷದಷ್ಟು ಜನರಿದ್ದು, ಸೋರಿಕೆಯಾಗಿರುವ ಜಾತಿಗಣತಿ ವರದಿಯಲ್ಲಿ ಕೇವಲ 9.20 ಲಕ್ಷ ಎಂದು ತೋರಿಸಲಾಗಿದೆ ಎಂಬ ಮಾಹಿತಿಯಿದೆ. ಇದು ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಪಟ್ಟಸಾಲೆ ಸಮುದಾಯದ ರಾಜ್ಯ ಘಟಕದ ಗೌರವಾಧ್ಯಕ್ಷ ಶಿವಪ್ಪ ಶೆಟ್ರು ಹೇಳಿದರು.</p>.<p>ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಸಾಲೇಶ್ವರ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಸೋಮವಾರ ನಡೆದ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಜನಸಂಖ್ಯೆಯೇ ಮಾನದಂಡವಾಗಲಿದೆ. ನೇಕಾರ ಸಮುದಾಯಗಳ ಒಕ್ಕೂಟದಿಂದ ಪ್ರತ್ಯೇಕ ‘ಆ್ಯಪ್’ ಸಿದ್ಧಪಡಿಸಿದ್ದು ಎಲ್ಲರೂ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಪತ್ರವನ್ನು ಪ್ರತಿ ಮನೆಗೂ ತಲುಪಿಸಲಾಗುವುದು ಎಂದರು.</p>.<p>ಪಟ್ಟಸಾಲೆ ಗುರುಪೀಠದ ಬಸವರಾಜ ಪಟ್ಟಾಧಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ರಾಜ್ಯ ಘಟಕದ ಅಧ್ಯಕ್ಷ ಎಚ್. ತಿಪ್ಪೇಸ್ವಾಮಿ, ಮಾಜಿ ಗೌರವಾಧ್ಯಕ್ಷ ಡಿ. ಷಡಾಕ್ಷರಪ್ಪ, ಸ್ಥಳೀಯ ಘಟಕದ ಅಧ್ಯಕ್ಷ ಎನ್. ಅಪ್ಪಳ್ಳಿ, ನೇಕಾರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ರಾಜ್ಯದಲ್ಲಿ ನೇಕಾರ ಸಮುದಾಯದ ಅಂದಾಜು 50 ಲಕ್ಷದಷ್ಟು ಜನರಿದ್ದು, ಸೋರಿಕೆಯಾಗಿರುವ ಜಾತಿಗಣತಿ ವರದಿಯಲ್ಲಿ ಕೇವಲ 9.20 ಲಕ್ಷ ಎಂದು ತೋರಿಸಲಾಗಿದೆ ಎಂಬ ಮಾಹಿತಿಯಿದೆ. ಇದು ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಪಟ್ಟಸಾಲೆ ಸಮುದಾಯದ ರಾಜ್ಯ ಘಟಕದ ಗೌರವಾಧ್ಯಕ್ಷ ಶಿವಪ್ಪ ಶೆಟ್ರು ಹೇಳಿದರು.</p>.<p>ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಸಾಲೇಶ್ವರ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಸೋಮವಾರ ನಡೆದ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಜನಸಂಖ್ಯೆಯೇ ಮಾನದಂಡವಾಗಲಿದೆ. ನೇಕಾರ ಸಮುದಾಯಗಳ ಒಕ್ಕೂಟದಿಂದ ಪ್ರತ್ಯೇಕ ‘ಆ್ಯಪ್’ ಸಿದ್ಧಪಡಿಸಿದ್ದು ಎಲ್ಲರೂ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಪತ್ರವನ್ನು ಪ್ರತಿ ಮನೆಗೂ ತಲುಪಿಸಲಾಗುವುದು ಎಂದರು.</p>.<p>ಪಟ್ಟಸಾಲೆ ಗುರುಪೀಠದ ಬಸವರಾಜ ಪಟ್ಟಾಧಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ರಾಜ್ಯ ಘಟಕದ ಅಧ್ಯಕ್ಷ ಎಚ್. ತಿಪ್ಪೇಸ್ವಾಮಿ, ಮಾಜಿ ಗೌರವಾಧ್ಯಕ್ಷ ಡಿ. ಷಡಾಕ್ಷರಪ್ಪ, ಸ್ಥಳೀಯ ಘಟಕದ ಅಧ್ಯಕ್ಷ ಎನ್. ಅಪ್ಪಳ್ಳಿ, ನೇಕಾರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>