ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯಗೆ ಕ್ಷೇತ್ರ ಬಿಟ್ಟುಕೊಡುವೆ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ

Last Updated 10 ಮಾರ್ಚ್ 2020, 2:36 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಅವರು ಬಿಜೆಪಿಗೆ ಬರುವುದಾದರೆ ಸ್ವಾಗತಿಸುತ್ತೇನೆ. ರಾಜಕಾರಣದಲ್ಲಿ ಯಾರೂ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ’ ಎಂದರು.

‘ಶಾಸಕ ರಮೇಶ್‌ ಕುಮಾರ್‌ ಅವರು ಪ್ರಧಾನಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ತಪ್ಪು. ವಿಧಾನಸಭಾಧ್ಯಕ್ಷರಾಗಿ ಕೆಲಸ ಮಾಡಿದ ಅವರು, ಕಾನೂನು ಬಗ್ಗೆ ಅಪಾರ ತಿಳಿವಳಿಕೆ ಇರುವಂತೆ ಮಾತನಾಡುತ್ತಾರೆ. ಆದರೆ, ಅವರ ನಡವಳಿಕೆಯಲ್ಲಿ ವ್ಯತ್ಯಾಸವಿದೆ. ಯಾರನ್ನೋ ಮೆಚ್ಚಿಸಲು ಇಂತಹ ಹೇಳಿಕೆಗಳನ್ನು ನೀಡಬಾರದು’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT