ನೂರಾರು ಮಹಿಳೆಯರು ಹಣೆಯಲ್ಲಿ ಭಂಡಾರ ಧರಿಸಿ, ಕೈಯಲ್ಲಿ ಪೂರ್ಣಕುಂಭ ಹಿಡಿದು ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗದ ಈಶ್ವರಾನಂದಪುರಿ ಸ್ವಾಮೀಜಿ, ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಸೋಮಲಿಂಗೇಶ್ವರ ಸ್ವಾಮೀಜಿ, ಮೈಲಾರದ ಗೊರವಯ್ಯ ರಾಮಪ್ಪ, ಮುತ್ತೇಶ್ವರಸ್ವಾಮೀಜಿ, ಮಾದಯ್ಯ ಸ್ವಾಮೀಜಿ, ಶರಭಯ್ಯ ಸ್ವಾಮೀಜಿ, ಸಂಗಯ್ಯ ಗುರುವಿನವರು, ರೇವಯ್ಯ ಒಡೆಯರ್, ಮಾಳಿಂಗರಾಯ ಒಡೆಯರ್, ಓಂಕಾರ ಒಡೆಯರ್ ಅವರನ್ನು ಭಕ್ತಿಯಿಂದ ಬರಮಾಡಿಕೊಂಡರು.