<p><strong>ಚಿತ್ರದುರ್ಗ: </strong>ಪರಿಶಿಷ್ಟ ಪಂಗಡದ ಸೌಲಭ್ಯಕ್ಕೆ ಒತ್ತಾಯಿಸಿ ಕುರುಬ ಸಮುದಾಯ ನಡೆಸುತ್ತಿರುವ ಹೋರಾಟವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಬೆಂಬಲಿಸಿದರೆ ತಪ್ಪೇನು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಾದಯಾತ್ರೆ ಆರ್ಎಸ್ಎಸ್ ಪ್ರಾಯೋಜಿತ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದರು.</p>.<p>‘ಕಾಗಿನೆಲೆ ಗುರುಪೀಠದ ಮೊದಲ ಪೀಠಾಧಿಪತಿ ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿ ಸಂಘದ ಹಿನ್ನೆಲೆ ಹೊಂದಿದ್ದರು. ಹಿಂದೂ ಧರ್ಮವನ್ನು ಪ್ರತಿಪಾದನೆ ಮಾಡುವ ಆರ್ಎಸ್ಎಸ್ ಗುಮ್ಮವಲ್ಲ. ಅದು ನಿಷೇಧಿತ ಸಂಸ್ಥೆಯಲ್ಲ’ ಎಂದು ತಿರುಗೇಟು ನೀಡಿದರು.</p>.<p>‘ಕುರುಬ ಸಮುದಾಯಕ್ಕೆ ಐದು ಸಾವಿರ ವರ್ಷಗಳ ಇತಿಹಾಸವಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆ ಈಗ ಹುಟ್ಟಿರುವುದಲ್ಲ. ಹಲವು ದಶಕಗಳಿಂದಲೂ ಸರ್ಕಾರಕ್ಕೆ ಈ ಬೇಡಿಕೆ ಸಲ್ಲಿಸುತ್ತಿದ್ದೇವೆ. ಹಿಂದೊಮ್ಮೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದರೂ ಪ್ರಯೋಜನವಾಗಿಲ್ಲ. ಸೌಲಭ್ಯ ಪಡೆಯುವ ಉದ್ದೇಶದಿಂದ ನಿರಂಜನಾನಂದಪುರಿ ಸ್ವಾಮೀಜಿ ಸಾರಥ್ಯದಲ್ಲಿ ಹೋರಾಟ ಆರಂಭಿಸಲಾಗಿದೆ’ ಎಂದು ಹೇಳಿದರು.</p>.<p>‘ಕುರಿ ಸಾಕಾಣಿಕೆಯನ್ನು ಮೂಲ ಕಸುಬನ್ನಾಗಿ ಹೊಂದಿರುವ ಸಮುದಾಯ ತೀರಾ ಹಿಂದುಳಿದಿದೆ. ಕುರಿಗಳ ಜೊತೆಗೆ ಅಲೆದು ಬದುಕು ಕಟ್ಟಿಕೊಂಡ ಕುರುಬರ ಕುಲಶಾಸ್ತ್ರೀಯ ಅಧ್ಯಯನ ನಡೆಸುವ ಅಗತ್ಯವಿದೆ. ಸರಿಯಾದ ಮೀಸಲಾತಿ ಸೌಲಭ್ಯ ದೊರಕಿದರೆ ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಸಿಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಪರಿಶಿಷ್ಟ ಪಂಗಡದ ಸೌಲಭ್ಯಕ್ಕೆ ಒತ್ತಾಯಿಸಿ ಕುರುಬ ಸಮುದಾಯ ನಡೆಸುತ್ತಿರುವ ಹೋರಾಟವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಬೆಂಬಲಿಸಿದರೆ ತಪ್ಪೇನು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಾದಯಾತ್ರೆ ಆರ್ಎಸ್ಎಸ್ ಪ್ರಾಯೋಜಿತ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದರು.</p>.<p>‘ಕಾಗಿನೆಲೆ ಗುರುಪೀಠದ ಮೊದಲ ಪೀಠಾಧಿಪತಿ ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿ ಸಂಘದ ಹಿನ್ನೆಲೆ ಹೊಂದಿದ್ದರು. ಹಿಂದೂ ಧರ್ಮವನ್ನು ಪ್ರತಿಪಾದನೆ ಮಾಡುವ ಆರ್ಎಸ್ಎಸ್ ಗುಮ್ಮವಲ್ಲ. ಅದು ನಿಷೇಧಿತ ಸಂಸ್ಥೆಯಲ್ಲ’ ಎಂದು ತಿರುಗೇಟು ನೀಡಿದರು.</p>.<p>‘ಕುರುಬ ಸಮುದಾಯಕ್ಕೆ ಐದು ಸಾವಿರ ವರ್ಷಗಳ ಇತಿಹಾಸವಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆ ಈಗ ಹುಟ್ಟಿರುವುದಲ್ಲ. ಹಲವು ದಶಕಗಳಿಂದಲೂ ಸರ್ಕಾರಕ್ಕೆ ಈ ಬೇಡಿಕೆ ಸಲ್ಲಿಸುತ್ತಿದ್ದೇವೆ. ಹಿಂದೊಮ್ಮೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದರೂ ಪ್ರಯೋಜನವಾಗಿಲ್ಲ. ಸೌಲಭ್ಯ ಪಡೆಯುವ ಉದ್ದೇಶದಿಂದ ನಿರಂಜನಾನಂದಪುರಿ ಸ್ವಾಮೀಜಿ ಸಾರಥ್ಯದಲ್ಲಿ ಹೋರಾಟ ಆರಂಭಿಸಲಾಗಿದೆ’ ಎಂದು ಹೇಳಿದರು.</p>.<p>‘ಕುರಿ ಸಾಕಾಣಿಕೆಯನ್ನು ಮೂಲ ಕಸುಬನ್ನಾಗಿ ಹೊಂದಿರುವ ಸಮುದಾಯ ತೀರಾ ಹಿಂದುಳಿದಿದೆ. ಕುರಿಗಳ ಜೊತೆಗೆ ಅಲೆದು ಬದುಕು ಕಟ್ಟಿಕೊಂಡ ಕುರುಬರ ಕುಲಶಾಸ್ತ್ರೀಯ ಅಧ್ಯಯನ ನಡೆಸುವ ಅಗತ್ಯವಿದೆ. ಸರಿಯಾದ ಮೀಸಲಾತಿ ಸೌಲಭ್ಯ ದೊರಕಿದರೆ ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಸಿಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>