<p>ಚಿತ್ರದುರ್ಗ: ಅಳಿವಿನಂಚಿನಲ್ಲಿರುವ ಸೂಕ್ಷ್ಮ ಪ್ರಾಣಿ ಎಂದೇ ಗುರುತಿಸಲಾಗಿರುವ ಕೆನ್ನಾಯಿ (ವೈಲ್ಡ್ ಡಾಗ್) ಜೋಗಿಮಟ್ಟಿ ವನ್ಯಧಾಮದಲ್ಲಿ ಮೊದಲ ಬಾರಿಗೆ ಪತ್ತೆಯಾಗಿವೆ. ಹೆಣ್ಣು, ಗಂಡು ಹಾಗೂ ಮರಿಯ ಪರಿವಾರವೊಂದು ಜಲಮೂಲದಲ್ಲಿ ನೀರು ಕುಡಿಯುವಾಗ ಅರಣ್ಯ ಇಲಾಖೆಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p><p>ಕಾಡುನಾಯಿ, ಸೀಳುನಾಯಿ ಎಂದು ಕರೆಸಿಕೊಳ್ಳುವ ಕೆನ್ನಾಯಿಗಳು ಸಾಮಾನ್ಯವಾಗಿ ದಟ್ಟ ಅರಣ್ಯದಲ್ಲಿ ಕಾಣಿಸಿಕೊಳ್ಳುತ್ತವೆ. ಚಿತ್ರದುರ್ಗದಂತಹ ಕುರುಚಲು ಕಾಡಿನಲ್ಲಿ ಕೆನ್ನಾಯಿ ಕಾಣಿಸಿಕೊಂಡಿದ್ದು ವನ್ಯಜೀವಿ ಪ್ರೇಮಿಗಳನ್ನು ಚಕಿತಗೊಳಿಸಿದೆ. ಜೋಗಿಮಟ್ಟಿ ವನ್ಯಧಾಮಕ್ಕೆ ಎಲ್ಲಿಂದ ಬಂದಿರಬಹುದು ಎಂಬ ಜಿಜ್ಞಾಸೆ ಶುರುವಾಗಿದೆ.</p><p>ಜೋಗಿಮಟ್ಟಿ ವನ್ಯಧಾಮಕ್ಕೆ ಪ್ರತಿ ಬೇಸಿಗೆಯಲ್ಲಿ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗುತ್ತದೆ. ಬೆಂಕಿ ಅವಘಡದಿಂದ ಕಾಡು ರಕ್ಷಿಸುವ ಉದ್ದೇಶದಿಂದ ಅರಣ್ಯ ಇಲಾಖೆ ಇಂತಹದೊಂದು ಕ್ರಮ ಕೈಗೊಂಡಿದೆ. ಮಾನವ ಹಸ್ತಕ್ಷೇಪ ಕಡಿಮೆಯಾದ ಪರಿಣಾಮವಾಗಿ ಅಪರೂಪದ ವನ್ಯಜೀವಿಗಳು ಕಾಣಿಸಿಕೊಳ್ಳುತ್ತಿವೆ. ಮೂರು ವರ್ಷಗಳಿಂದ ಕಡವೆಯ ಗುಂಪೊಂದು ನಿರಂತರವಾಗಿ ಕಾಣಿಸಿಕೊಳ್ಳುತ್ತಿದೆ.</p><p>‘ವನ್ಯಜೀವಿಗಳ ಅನುಕೂಲಕ್ಕಾಗಿ ಜಲಮೂಲಗಳನ್ನು ಕೃತಕವಾಗಿ ನಿರ್ಮಿಸಲಾಗಿದೆ. ಇಂತಹ ಕಡೆ ಕ್ಯಾಮೆರಾ ಟ್ರ್ಯಾಪಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ನೀರು ಕುಡಿಯಲು ಬರುವ ಪ್ರಾಣಿಗಳು ಈ ಕ್ಯಾಮೆರಾದಲ್ಲಿ ಸೆರೆಯಾಗುತ್ತವೆ. ಫೆಬ್ರುವರಿಯಲ್ಲಿ ಕೆನ್ನಾಯಿ ಕುಟುಂಬವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ರಾಜಣ್ಣ ಮಾಹಿತಿ ನೀಡಿದ್ದಾರೆ.</p><p> ಭದ್ರಾ ಅರಣ್ಯದಲ್ಲಿ ಕೆನ್ನಾಯಿಗಳಿವೆ. ಚನ್ನಗಿರಿಯ ಕುಕ್ಕುವಾಡ ಉಬ್ರಾಣಿ ಅರಣ್ಯ ಇದಕ್ಕೆ ಹೊಂದಿಕೊಂಡಿದೆ. ಅಲ್ಲಿಂದ ಜೋಗಿಮಟ್ಟಿ ವನ್ಯಧಾಮಕ್ಕೆ ಇವು ಬಂದಿರುವ ಸಾಧ್ಯತೆ ಇದೆ. </p><p><strong>-ಟಿ.ರಾಜಣ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿತ್ರದುರ್ಗ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಅಳಿವಿನಂಚಿನಲ್ಲಿರುವ ಸೂಕ್ಷ್ಮ ಪ್ರಾಣಿ ಎಂದೇ ಗುರುತಿಸಲಾಗಿರುವ ಕೆನ್ನಾಯಿ (ವೈಲ್ಡ್ ಡಾಗ್) ಜೋಗಿಮಟ್ಟಿ ವನ್ಯಧಾಮದಲ್ಲಿ ಮೊದಲ ಬಾರಿಗೆ ಪತ್ತೆಯಾಗಿವೆ. ಹೆಣ್ಣು, ಗಂಡು ಹಾಗೂ ಮರಿಯ ಪರಿವಾರವೊಂದು ಜಲಮೂಲದಲ್ಲಿ ನೀರು ಕುಡಿಯುವಾಗ ಅರಣ್ಯ ಇಲಾಖೆಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p><p>ಕಾಡುನಾಯಿ, ಸೀಳುನಾಯಿ ಎಂದು ಕರೆಸಿಕೊಳ್ಳುವ ಕೆನ್ನಾಯಿಗಳು ಸಾಮಾನ್ಯವಾಗಿ ದಟ್ಟ ಅರಣ್ಯದಲ್ಲಿ ಕಾಣಿಸಿಕೊಳ್ಳುತ್ತವೆ. ಚಿತ್ರದುರ್ಗದಂತಹ ಕುರುಚಲು ಕಾಡಿನಲ್ಲಿ ಕೆನ್ನಾಯಿ ಕಾಣಿಸಿಕೊಂಡಿದ್ದು ವನ್ಯಜೀವಿ ಪ್ರೇಮಿಗಳನ್ನು ಚಕಿತಗೊಳಿಸಿದೆ. ಜೋಗಿಮಟ್ಟಿ ವನ್ಯಧಾಮಕ್ಕೆ ಎಲ್ಲಿಂದ ಬಂದಿರಬಹುದು ಎಂಬ ಜಿಜ್ಞಾಸೆ ಶುರುವಾಗಿದೆ.</p><p>ಜೋಗಿಮಟ್ಟಿ ವನ್ಯಧಾಮಕ್ಕೆ ಪ್ರತಿ ಬೇಸಿಗೆಯಲ್ಲಿ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗುತ್ತದೆ. ಬೆಂಕಿ ಅವಘಡದಿಂದ ಕಾಡು ರಕ್ಷಿಸುವ ಉದ್ದೇಶದಿಂದ ಅರಣ್ಯ ಇಲಾಖೆ ಇಂತಹದೊಂದು ಕ್ರಮ ಕೈಗೊಂಡಿದೆ. ಮಾನವ ಹಸ್ತಕ್ಷೇಪ ಕಡಿಮೆಯಾದ ಪರಿಣಾಮವಾಗಿ ಅಪರೂಪದ ವನ್ಯಜೀವಿಗಳು ಕಾಣಿಸಿಕೊಳ್ಳುತ್ತಿವೆ. ಮೂರು ವರ್ಷಗಳಿಂದ ಕಡವೆಯ ಗುಂಪೊಂದು ನಿರಂತರವಾಗಿ ಕಾಣಿಸಿಕೊಳ್ಳುತ್ತಿದೆ.</p><p>‘ವನ್ಯಜೀವಿಗಳ ಅನುಕೂಲಕ್ಕಾಗಿ ಜಲಮೂಲಗಳನ್ನು ಕೃತಕವಾಗಿ ನಿರ್ಮಿಸಲಾಗಿದೆ. ಇಂತಹ ಕಡೆ ಕ್ಯಾಮೆರಾ ಟ್ರ್ಯಾಪಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ನೀರು ಕುಡಿಯಲು ಬರುವ ಪ್ರಾಣಿಗಳು ಈ ಕ್ಯಾಮೆರಾದಲ್ಲಿ ಸೆರೆಯಾಗುತ್ತವೆ. ಫೆಬ್ರುವರಿಯಲ್ಲಿ ಕೆನ್ನಾಯಿ ಕುಟುಂಬವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ರಾಜಣ್ಣ ಮಾಹಿತಿ ನೀಡಿದ್ದಾರೆ.</p><p> ಭದ್ರಾ ಅರಣ್ಯದಲ್ಲಿ ಕೆನ್ನಾಯಿಗಳಿವೆ. ಚನ್ನಗಿರಿಯ ಕುಕ್ಕುವಾಡ ಉಬ್ರಾಣಿ ಅರಣ್ಯ ಇದಕ್ಕೆ ಹೊಂದಿಕೊಂಡಿದೆ. ಅಲ್ಲಿಂದ ಜೋಗಿಮಟ್ಟಿ ವನ್ಯಧಾಮಕ್ಕೆ ಇವು ಬಂದಿರುವ ಸಾಧ್ಯತೆ ಇದೆ. </p><p><strong>-ಟಿ.ರಾಜಣ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿತ್ರದುರ್ಗ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>