<p><strong>ಚಿಕ್ಕಜಾಜೂರು:</strong> ಸಮೀಪದ ಹೊಸಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಹೋಟೆಲ್ಗೆ ಬೆಂಕಿ ಹತ್ತಿಕೊಂಡು ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಸಮೀಪದ ಬಿಜ್ಜೆನಾಳ್ ಗ್ರಾಮದ ಲಕ್ಷ್ಮಮ್ಮ (55) ಮೃತಪಟ್ಟವರು. ಎರಗಟ್ಟಿಹಳ್ಳಿ ಗ್ರಾಮದ ನೀಲಮ್ಮ, ಬಿಜ್ಜೆನಾಳ್ ಗ್ರಾಮದ ರೇಣುಕಮ್ಮ, ಹೊಸಹಳ್ಳಿ ಗ್ರಾಮದ ರಚನಾ, ಶಶಿಕಲಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಪರಮೇಶ್ವರಪ್ಪ ಅವರು ಚಿಕ್ಕ ಗುಡಿಸಲಿನಲ್ಲಿ ಹೋಟೆಲ್ ನಡೆಸುತ್ತಿದ್ದರು. ಹೋಟೆಲ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪಕ್ಕದ ಶೆಡ್ನಲ್ಲಿ ಅಡಿಕೆ ಸುಲಿಯುತ್ತಿದ್ದ ಈ ಮಹಿಳೆಯರು ಹೋಟೆಲ್ಗೆ ಬೆಂಕಿ ಹತ್ತಿರುವುದನ್ನು ನೋಡುತ್ತಾ ನಿಂತಿದ್ದಾಗ, ಇದಕ್ಕಿದ್ದಂತೆ ಹೋಟೆಲ್ನಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದೆ.</p>.<p>ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದರು.</p>.<p>ಡಿವೈಎಸ್ಪಿ ಅನಿಲ್ಕುಮಾರ್, ಸಿಪಿಐ ಚಿಕ್ಕಣ್ಣನವರ್, ಪಿಎಸ್ಐ ಎಂ.ಟಿ. ದೀಪು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು:</strong> ಸಮೀಪದ ಹೊಸಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಹೋಟೆಲ್ಗೆ ಬೆಂಕಿ ಹತ್ತಿಕೊಂಡು ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಸಮೀಪದ ಬಿಜ್ಜೆನಾಳ್ ಗ್ರಾಮದ ಲಕ್ಷ್ಮಮ್ಮ (55) ಮೃತಪಟ್ಟವರು. ಎರಗಟ್ಟಿಹಳ್ಳಿ ಗ್ರಾಮದ ನೀಲಮ್ಮ, ಬಿಜ್ಜೆನಾಳ್ ಗ್ರಾಮದ ರೇಣುಕಮ್ಮ, ಹೊಸಹಳ್ಳಿ ಗ್ರಾಮದ ರಚನಾ, ಶಶಿಕಲಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಪರಮೇಶ್ವರಪ್ಪ ಅವರು ಚಿಕ್ಕ ಗುಡಿಸಲಿನಲ್ಲಿ ಹೋಟೆಲ್ ನಡೆಸುತ್ತಿದ್ದರು. ಹೋಟೆಲ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪಕ್ಕದ ಶೆಡ್ನಲ್ಲಿ ಅಡಿಕೆ ಸುಲಿಯುತ್ತಿದ್ದ ಈ ಮಹಿಳೆಯರು ಹೋಟೆಲ್ಗೆ ಬೆಂಕಿ ಹತ್ತಿರುವುದನ್ನು ನೋಡುತ್ತಾ ನಿಂತಿದ್ದಾಗ, ಇದಕ್ಕಿದ್ದಂತೆ ಹೋಟೆಲ್ನಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದೆ.</p>.<p>ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದರು.</p>.<p>ಡಿವೈಎಸ್ಪಿ ಅನಿಲ್ಕುಮಾರ್, ಸಿಪಿಐ ಚಿಕ್ಕಣ್ಣನವರ್, ಪಿಎಸ್ಐ ಎಂ.ಟಿ. ದೀಪು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>